ನಕ್ಸಲರ ಭಯ : ಮಲೆನಾಡಿನಲ್ಲಿ ಪ್ರಚಾರಕ್ಕೆ ಕೊಕ್

ಶಿವಮೊಗ್ಗ, ಏ. 21 : ಮೊದಲ ಹಂತದ ಚುನಾವಣೆ ವೇಳೆಯಲ್ಲಿ ನಕ್ಸಲೀಯರು ಪ್ರಮುಖ ರಾಜಕಾರಣಿಗಳ ಮೇಲೆ ದಾಳಿ ನಡೆಸುವ ಸಾದ್ಯತೆಗಳಿವೆ ಎನ್ನುವ ವರದಿಯ ಹಿನ್ನೆಲೆಯಲ್ಲಿ ಮಲೆನಾಡು ಪ್ರದೇಶದ ನಕ್ಸಲ್ ಪೀಡಿತ ಗ್ರಾಮಗಳಿಗೆ ಪ್ರಚಾರ ಕಾರ್ಯಕ್ಕೆ ತೆರಳಲು ರಾಜಕಾರಣಿಗಳು ಹಿಂದೇಟು ಹಾಕುತ್ತಿರುವ ವಿಷಯ ಬೆಳಕಿಗೆ ಬಂದಿದೆ.

ಮಲೆನಾಡು ಪ್ರದೇಶದ ಕೆಲ ಗ್ರಾಮಗಳಲ್ಲಿ ನಕ್ಸಲರು ಓಡಾಡುತ್ತಿರುವ ಹಿನ್ನೆಲೆಯಲ್ಲಿ ರಾಜಕಾರಣಿಗಳು ಈ ನಿರ್ಧಾರಕ್ಕೆ ಬಂದಿದ್ದಾರೆ. ಮುಖ್ಯವಾಗಿ ಸಾಗರ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳ ಕೆಲ ಹಳ್ಳಿಗಳಿಗೆ ಈವರೆಗೂ ಯಾವ ಪಕ್ಷದ ನಾಯಕರು ಪ್ರಚಾರಕ್ಕೆ ತೆರಳಿಲ್ಲ. ಅಲ್ಲದೇ ಮತದಾನದ ದಿನ ಹತ್ತಿರವಾಗುತ್ತಿದ್ದು, ಭಾರಿ ಬಿಗಿ ಭದ್ರತೆಯೊಂದಿಗೆ ಮತದಾನ ನಡೆಸಲು ಕ್ರಮಕೈಗೊಳ್ಳಲಾಗಿದೆ.

ಅಲ್ಲದೇ ತಪ್ಪದೇ ಎಲ್ಲರೂ ಮತದಾನ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳಲಾಗುತ್ತಿದೆ. ತೀರ್ಥಹಳ್ಳಿ ಸುಮಾರು 26 ಹಳ್ಳಿಗಳು ನಕ್ಸಲ್ ಪೀಡಿತ ಹಳ್ಳಿಗಳಿದ್ದು, ಮತದಾನ ಚಲಾಯಿಸಿದರೆ ಹತ್ಯೆ ಮಾಡುವ ಬೆದರಿಕೆಯನ್ನು ನಕ್ಸಲೀಯರು ಹಾಕಿದ್ದಾರೆ ಎನ್ನಲಾಗಿದೆ. ಎರಡನೇ ಹಂತದ ಚುನಾವಣೆಗೆ ಏಪ್ರಿಲ್ 30 ರಂದು ಶಿವಮೊಗ್ಗದಲ್ಲಿ ಮತದಾನ ನಡೆಯಲಿದೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
ಏ 30 ರಂದು ರಾಜ್ಯದಲ್ಲಿ ನಕ್ಸಲೀಯರ ದಾಳಿ ?
ಶಿವಮೊಗ್ಗ ಲೋಕಸಭೆ ಕ್ಷೇತ್ರದ ಪರಿಚಯ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+