ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ, 6 ಸಾವು
ಹುಬ್ಬಳ್ಳಿ, ಏ. 21 : ಕಲಘಟಗಿಯ ಜುಂಜಲ್ಬೈಲ್ ಸಮೀಪ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡದ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಸಮೀಪ ನಡೆದಿದೆ. ಅದಿರು ತುಂಬಿದ ಲಾರಿ ಮತ್ತು ಕಾರು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಈ ಘಟನೆ ನಡೆದಿದೆ.
ಮೃತಪಟ್ಟವರು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನವರಾಗಿದ್ದು ಮುಂಬಯಿಗೆ ತೆರಳುತ್ತಿದ್ದರು ಎಂದು ಪೋಲಿಸ್ ಅಧಿಕಾರಿಗಳು ತಿಳಿಸಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದು, ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ. ಮೃತಪಟ್ಟವರನ್ನು ಮೈಕೆಲ್ ಫ್ರಾನ್ಸಿಸ್, ಅನಿತಾ ಮೈಕೆಲ್, ಥಾಮಸ್, ಕ್ಲಿಂಟನ್, ಮೈಕೆಲ್, ಸ್ವೀಟಿ ಮತ್ತು ಶಾನ್ ಎಂದು ಗುರುತಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Tuesday, April 21, 2009, 15:48 [IST]