ತಮಿಳರನ್ನು ಉಳಿಸಲು ಕೇಂದ್ರಕ್ಕೆ ಕರುಣಾನಿಧಿ ಒತ್ತಾಯ
ಚೆನ್ನೈ, ಏ. 21 : ಶ್ರೀಲಂಕಾದಲ್ಲಿರುವ ತಮಿಳು ಉಗ್ರರ ಮೇಲೆ ನಡೆಯುತ್ತಿರುವ ಸೇನಾ ಕಾರ್ಯಾಚರಣೆ ಕೈಬಿಡುವಂತೆ ಲಂಕಾ ಸರಕಾರದ ಮೇಲೆ ಒತ್ತಡ ಹೇರುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ. ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಶರಣಾಗತಿಗೆ ಲಂಕಾ ಸರಕಾರ ನೀಡಿದ್ದ ಗಡುವು ಮುಗಿದಿದ್ದು, ಸೇನಾ ಕಾರ್ಯಾಚರಣೆಗೆ ಲಂಕಾ ಸರ್ಕಾರ ಆದೇಶ ನೀಡಿದೆ.
ಸೇವಾ ಕಾರ್ಯಾಚರಣೆಯನ್ನು ಕೈಬಿಟ್ಟು ಶಾಶ್ವತ ಶಾಂತಿ ಒಪ್ಪಂದಕ್ಕೆ ಬರುವಂತೆ ಕೇಂದ್ರ ಸರಕಾರ ಲಂಕಾ ಸರಕಾರದ ಮೇಲೆ ಒತ್ತಡ ಹೇರಬೇಕು ಎಂದು ಕರುಣಾನಿಧಿ ಅವರು ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ ಅವರಿಗೆ ಟೆಲಿಗ್ರಾಮ್ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಶೀಘ್ರವೇ ತಮಿಳರ ಮೇಲೆ ನಡೆಯುತ್ತಿರುವ ಕಾರ್ಯಾಚರಣೆ ನಿಲ್ಲಿಸುವಂತೆ ಕೇಳಿಕೊಂಡಿದ್ದಾರೆ.
ಕೇಂದ್ರದ ಸರಕಾರದ ಸೂಚನೆ ಲಂಕಾ ಸರಕಾರ ನಿರಾಕರಿಸಿದ್ದೆ ಆದಲ್ಲಿ ಶ್ರೀಲಂಕಾದೊಂದಿಗಿನ ಎಲ್ಲ ರಾಜತಾಂತ್ರಿಕ ವ್ಯವಹಾರಗಳನ್ನು ರದ್ದುಗೊಳಿಸಬೇಕು ಎಂದು ಕರುಣಾನಿಧಿ ಆಗ್ರಹಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಪ್ರಭಾಕರನ್ ನನ್ನ ಆಪ್ತ ಸ್ನೇಹಿತ ಎಂದು ಹೇಳಿಕೆ ನೀಡಿ ಕೋಲಾಹಲ ಸೃಷ್ಟಿಸಿದ್ದ ಕರುಣಾನಿಧಿ ವ್ಯಾಪಕ ಟೀಕೆ ಬಂದ ಹಿನ್ನೆಲೆಯಲ್ಲಿ ನಾನು ಹಾಗೆ ಹೇಳಿಲ್ಲ. ಮಾದ್ಯಮದವರು ತಪ್ಪಾಗಿ ಅರ್ಥೈಸಿ ಪ್ರಕಟಿಸಿದ್ದಾರೆ ಎಂದಿದ್ದರು. ರಾಜೀವ ಗಾಂಧಿ ಹತ್ಯೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಇನ್ನೊಂದು ಹೇಳಿಕೆ ನೀಡಿದ್ದರು.
(ದಟ್ಸ್ ಕನ್ನಡ ವಾರ್ತೆ)
ರಾಜೀವ ಹತ್ಯೆಯ ಹಂತಕರನ್ನು ಮರೆಯಲು ಸಾಧ್ಯವೇ
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications