ಚುನಾವಣೆಗೆ ವ್ಯಾಪಕ ಬಂದೋಬಸ್ತ್ : ಶಂಕರ್ ಬಿದರಿ
ಬೆಂಗಳೂರು, ಏ. 22 : ನಗರ ವ್ಯಾಪ್ತಿಯ 5 ಲೋಕಸಭೆ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯ ಭದ್ರತೆಗೆ ಕೇಂದ್ರ ಅರೆಸೇನಾ ಪಡೆ ಸೇರಿದಂತೆ 16 ಸಾವಿರ ಪೊಲೀಸರನ್ನು ನಿಯೋಜಿಸಲಾಗುವುದು ಎಂದುಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ತಿಳಿಸಿದ್ದಾರೆ.
ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ ಮತ್ತು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರಗಳ ಒಟ್ಟು 28 ವಿಧಾನಸಭೆ ಕ್ಷೇತ್ರಗಳಲ್ಲಿ 5,905 ಮಚಗಟ್ಟೆಗಳಿವೆ. ಇವುಗಳಲ್ಲಿ ಅತಿ ಸೂಕ್ಷ್ಮ 1,030, ಸೂಕ್ಷ್ಮ 1,533 ಹಾಗೂ 3,342 ಸಾಮಾನ್ಯ ಮತಗಟ್ಟೆಗಳಿವೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ವಿವರಿಸಿದರು.
ಇದೇ ಮೊದಲ ಬಾರಿಗೆ 1,500 ಎನ್ ಸಿಸಿ ಕೆಡಟ್ ಗಳನ್ನು ಬಳಸಿಕೊಳ್ಳಲಾಗುತ್ತಿದ್ದು. ಕೇಂದ್ರ ಅರೆಸೇನಾ ಪಡೆಯ 5 ಕಂಪನಿಗಳು. 3,820 ಗೃಹರಕ್ಷಕ ದಳದ ಸಿಬ್ಬಂದಿ, 498 ಮೊಬೈಲ್ ಸಂಚಾರದಳ, ಹೆಚ್ಚುವರಿ ಪೊಲೀಸ್ ಆಯುಕ್ತರು, ಡಿಸಿಪಿ ಸೇರಿದಂತೆ 41 ಹಿರಿಯ ಅಧಿಕಾರಿಗಳು, 139 ಇನ್ ಪೆಕ್ಟರ್ ಗಳು, 448 ಪಿಎಸ್ ಐ ಹಾಗೂ ಎಎಸ್ ಐಗಳು, 1.515 ಮುಖ್ಯಪೇದೆ, 7,125 ಪೇದೆಗಳು ಹಾಗೂ ಕೆಎಸ್ ಆರ್ ಪಿ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ವಿವರಿಸಿದರು.
ಲೋಕಸಭೆ ಹಿನ್ನೆಲೆಯಲ್ಲಿ ವೈನ್ ಶಾಪ್. ಬಾರ್ ಅಂಡ್ ರೆಸ್ಟೋರೆಂಟ್, ಪಬ್ ಗಳಲ್ಲಿ ಎಪ್ರಿಲ್ 21 ರ ಮಧ್ಯರಾತ್ರಿಯಿಂದ ಏಪ್ರಿಲ್ 23ರ ಮಧ್ಯರಾತ್ರಿ ವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಈ ನಿಯಮ ಪಂಚತಾರಾ ಹೋಟೆಲ್ ಗಳಿಗೂ ಅನ್ವಯಿಸುತ್ತದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಂಕರ ಬಿದರಿ ಎಚ್ಚರಿಕೆ ನೀಡಿದರು.
(ದಟ್ಸ್ ಕನ್ನಡ ವಾರ್ತೆ)
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications