233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg382435votingಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg382435votingಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg382435votingನಗೆಯು ಬರುತಿದೆ ನಮಗೆ ನಗೆಯು ಬರುತಿದೆ.../column/manikanth/2009/0415-open-letter-to-karnataka-politicians.htmlಸಂಸದರಾಗುವ ಕನಸಿನೊಂದಿಗೇ ಓಡಾಡುತ್ತಿರುವ ನಾಯಕರುಗಳಿಗೆ-ನಮಸ್ಕಾರ.ಮಹನೀಯರೆ, ಚುನಾವಣೆ ನಡೆವ ದಿನ ಹತ್ತಿರಾಗುತ್ತಿದೆ. ಈ ಸಂದರ್ಭದಲ್ಲಿಯೇ ನೀವು ಮನೆ ಮನೆಯ ಬಾಗಿಲು ತಟ್ಟುತ್ತಿದ್ದೀರಿ. ದೊಡ್ಡವರು, ಚಿಕ್ಕವರು, ಮುದುಕರು, ಮಕ್ಕಳಿಗೂ ಡೈವ್ ಹೊಡೆಯುತ್ತಿದ್ದೀರಿ. ಅಪರಿಚಿತರಿಗೂ ಕೈ ಮುಗಿಯುತ್ತಿದ್ದೀರಿ. ಕಂಡವರ ಮುಂದೆಲ್ಲಾ ಇಷ್ಟಗಲ ಹಲ್ಲು ಕಿಸಿದು, ಅವರ ಕೈ ಹಿಡಿದು- ಇದನ್ನು ಕಾಲು ಅಂತ ತಿಳ್ಕೊಳ್ಳಿ. ಮನೆ ಬಾಗಿಲಿಗೆ ಬಂದು ಭಿಕ್ಷೆ ಕೇಳ್ತಾ 35961http://kannada.oneindia.com/img/2009/04/15-politician2.jpg382435votingಮತದಾನ : ನಕ್ಸಲರ ಅಟ್ಟಹಾಸಕ್ಕೆ 17 ಸಾವು/news/2009/04/16/lok-sabha-election-first-phase-naxals-attack.htmlನವದೆಹಲಿ, ಏ. 16 : ಮೊದಲ ಹಂತದ ಚುನಾವಣೆ ನಡೆದ ಬಿಹಾರ್, ಜಾರ್ಖಂಡ್, ಛತ್ತೀಸ್ ಗಢ್ ಹಾಗೂ ಒರಿಸ್ಸಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. 5 ಮಂದಿ ಚುನಾವಣೆ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 17 ಮಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಕೆಲವಡೆ ಮತದಾನದ ಕೇಂದ್ರಗಳಿಗೆ ನುಗ್ಗಿ ಅಲ್ಲಿದ್ದ ಮತಯಂತ್ರಗಳನ್ನು ಅಪಹರಣ ಮತ್ತು ನಾಶ ಮಾಡಿರುವ ಘಟನೆಗಳು ನಡೆದಿರುವುದು ದೇಶದ 36007http://kannada.oneindia.com/img/2009/04/16-naxal-attack1.jpg382435votingಮತದಾರರೇ, ನಿಮ್ಮ ಓಟು ಯಾರಿಗೆ?/news/2009/04/22/golden-opportunity-to-elect-right-candidate.htmlಇದು ಸಮ್ಮಿಶ್ರ ಸರಕಾರಗಳ ಯುಗ. ನಾಲ್ಕುನಾಲ್ಕು ರಂಗಗಳು ಉದ್ಭವವಾಗಿರುವುದರಿಂದ ಏಕೈಕ ರಾಷ್ಟ್ರೀಯ ಪಕ್ಷಕ್ಕೆ ಇನ್ನೆಂದೂ ಬಹುಮತ ಪಡೆಯುವ ಸಾಧ್ಯತೆ ಬರಲಾರದು. ಸಣ್ಣಪುಟ್ಟ ಪಕ್ಷಗಳು ಅಷ್ಟೇ ಏಕೆ ಒಬ್ಬಂಟಿ ಸಂಸದನೂ ಸರಕಾರವನ್ನು ಉಳಿಸುವಲ್ಲಿ ಅಥವಾ ಉರುಳಿಸುವಲ್ಲಿ ನಿರ್ಣಾಯಕ ಪಾತ್ರವಹಿಸಬಲ್ಲ. ಆದ್ದರಿಂದ ಸಮರ್ಥ ನಾಯಕನನ್ನು ನೋಡಿ ಜನ ಮತ ಹಾಕಬೇಕೆ ಹೊರತು ಪಕ್ಷ ನೋಡಿ ಅಲ್ಲ.* ಪ್ರಸಾದ ನಾಯಿಕ15ನೇ ಲೋಕಸಭೆ 36143http://kannada.oneindia.com/img/2009/04/22-vote1.jpgnews"> ಮತದಾರರೇ, ನಿಮ್ಮ ಓಟು ಯಾರಿಗೆ? | Lok sabha election 2009 | Vote | Constitutional right | Karnataka - ಮತದಾರರೇ, ನಿಮ್ಮ ಓಟು ಯಾರಿಗೆ? - Kannada Oneindia

ಮತದಾರರೇ, ನಿಮ್ಮ ಓಟು ಯಾರಿಗೆ?

Vote without fail and elect right candidate
ಇದು ಸಮ್ಮಿಶ್ರ ಸರಕಾರಗಳ ಯುಗ. ನಾಲ್ಕುನಾಲ್ಕು ರಂಗಗಳು ಉದ್ಭವವಾಗಿರುವುದರಿಂದ ಏಕೈಕ ರಾಷ್ಟ್ರೀಯ ಪಕ್ಷಕ್ಕೆ ಇನ್ನೆಂದೂ ಬಹುಮತ ಪಡೆಯುವ ಸಾಧ್ಯತೆ ಬರಲಾರದು. ಸಣ್ಣಪುಟ್ಟ ಪಕ್ಷಗಳು ಅಷ್ಟೇ ಏಕೆ ಒಬ್ಬಂಟಿ ಸಂಸದನೂ ಸರಕಾರವನ್ನು ಉಳಿಸುವಲ್ಲಿ ಅಥವಾ ಉರುಳಿಸುವಲ್ಲಿ ನಿರ್ಣಾಯಕ ಪಾತ್ರವಹಿಸಬಲ್ಲ. ಆದ್ದರಿಂದ ಸಮರ್ಥ ನಾಯಕನನ್ನು ನೋಡಿ ಜನ ಮತ ಹಾಕಬೇಕೆ ಹೊರತು ಪಕ್ಷ ನೋಡಿ ಅಲ್ಲ.

* ಪ್ರಸಾದ ನಾಯಿಕ

15ನೇ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕರ್ನಾಟಕ ರಾಜ್ಯ ಅಣಿಯಾಗಿದೆ. ರಾಜಕೀಯ ಪಕ್ಷಗಳು ಎಂದಿನ ಉಮೇದಿನಿಂದ ಪ್ರಚಾರ ಮಾಡಿವೆ. ಚುನಾವಣಾ ಆಯೋಗಕ್ಕೆ ಚಳ್ಳೆಹಣ್ಣು ತಿನ್ನಿಸಿ ಸಾಕಷ್ಟು ಅನಾಚಾರಗಳನ್ನೂ ಮಾಡಿವೆ. ಪಾಕಿಗಳ ಭಯೋತ್ಪಾದನೆ, ನಕ್ಸಲೀಯರ ಬೆದರಿಕೆಯ ಹಿನ್ನೆಲೆಯಲ್ಲಿ ಅತ್ಯಂತ ಸುರಕ್ಷಿತವಾಗಿ ಚುನಾವಣೆ ನಡೆಸುವ ಹುಮ್ಮಸ್ಸಿನಿಂದ ರಾಜ್ಯ ಚುನಾವಣಾ ಆಯೋಗ ಸಂಪೂರ್ಣ ಸಿದ್ಧತೆ ಮಾಡಿಕೊಂಡಿರುವುದಾಗಿ ಹೇಳಿದೆ. ಆದರೆ, ಪ್ರಶ್ನೆ ಇರುವುದು ರಾಜಕಾರಣಿಗಳ ಜುಟ್ಟನ್ನು ಕೈಯಲ್ಲಿ ಹಿಡಿದುಕೊಳ್ಳುವ ಅವಕಾಶ ಗಿಟ್ಟಿಸಿರುವ ಮತದಾರ ಸಿದ್ಧನಾಗಿದ್ದಾನಾ ಎಂಬುದು?

ಈಗಂತೂ ಐದು ವರ್ಷದ ನಂತರ ಲೋಕಸಭೆ ಚುನಾವಣೆ ಬಂದಿದೆ. ಮುಂದೆಯೂ ಐದು ವರ್ಷದ ನಂತರವೇ ಬರುತ್ತದೆಂಬ ಗ್ಯಾರಂಟಿಯಿಲ್ಲ. ಮುಂದಿನದೇನೇ ಇದ್ದರೂ ಮತ ಚಲಾಯಿಸುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವ ಚಾನ್ಸು ಮತದಾರನಿಗೆ ಸಿಕ್ಕಿದೆ. ದೇಶ ಮುನ್ನಡೆಸಲು, ನಮ್ಮನ್ನು ಸಮರ್ಥವಾಗಿ ಪ್ರತಿನಿಧಿಸಲು ಅನರ್ಹರಾಗಿರುವ ಅಭ್ಯರ್ಥಿಗಳನ್ನು ಸದೆಬಡಿಯಲು ಸಿಕ್ಕಿರುವ ಏಕ ಮತ್ತು ಏಕೈಕ ಅವಕಾಶ ಇದೊಂದೇ. ಮತದಾನ ಮಾಡುವುದು ನಮ್ಮ ಸಾಂವಿಧಾನಿಕ ಹಕ್ಕು ಮಾತ್ರವಲ್ಲ ಅದು ನಮ್ಮ ಕರ್ತವ್ಯ ಕೂಡ.

Politics is the last resort of a scoundrel ಎಂಬ ಮಾತಿದೆ. ಇದನ್ನು ನಮ್ಮ ರಾಜಕಾರಣಿಗಳು ಒಪ್ಪುತ್ತಾರೋ ಬಿಡುತ್ತಾರೋ ಒಟ್ಟಿನಲ್ಲಿ ಅಂಥ scoundrelಗಳನ್ನೆಲ್ಲ ಬದಿಗೊತ್ತಿ ಇದ್ದುದರಲ್ಲೇ ಅತ್ಯುತ್ತಮ ಉಮೇದುವಾರನನ್ನು ಪಾರ್ಲಿಮೆಂಟಿಗೆ ಆರಿಸಿ ಕಳಿಸುವ ಜವಾಬ್ದಾರಿ ಮತದಾರನ ಮೇಲಿದೆ. ಮತ ಚಲಾಯಿಸುವುದು ಸಾಂವಿಧಾನಿಕ ಹಕ್ಕು ಹೇಗೋ ಚಲಾಯಿಸದಿರುವುದು ಕೂಡ ಸಾಂವಿಧಾನಕ ಹಕ್ಕೇ. ಆದರೆ, ಅಂಥ ಕಾರ್ಯವಾಗುವುದು ಬೇಡ. ತಮ್ಮ ಕ್ಷೇತ್ರದಲ್ಲಿರುವ ಎಲ್ಲ ಅಭ್ಯರ್ಥಿಗಳು ಉಪಯೋಗಕ್ಕೆ ಬಾರದಿರುವವರು ಎಂಬ ಭಾವನೆ ಅನೇಕರಲ್ಲಿ ಬರಬಹುದು. ಆದರೆ, ಅವರಲ್ಲೊಬ್ಬ ಆಯ್ಕೆಯಾಗಿ ಹೋಗೇ ಹೋಗುತ್ತಾನೆ. ಆದ್ದರಿಂದ ಉಪಯೋಗಕ್ಕೆ ಬಾರದಿರುವವರಲ್ಲಿಯೇ ಅತ್ಯುತ್ತಮನನ್ನು ಹುಡುಕಿ ಆರಿಸುವ ಹೊಣೆ ನಮ್ಮ ಮುಂದಿದೆ.

ಸಂಸತ್ತಿಗೆ ಆಯ್ಕೆಯಾಗಿ ಹೋಗುತ್ತಿರುವವರು ಶಾಸಕರಂತಲ್ಲ. ಸಂಸದೀಯರ ಜವಾಬ್ದಾರಿ ಶಾಸಕರಿಗಿಂತಲೂ ಹಿರಿದು. ಅವರು ಇಡೀ ರಾಜ್ಯವನ್ನು ಅತ್ಯಂತ ಸಮರ್ಥವಾಗಿ ಪ್ರತಿನಿಧಿಸುವ ತಾಕತ್ತುಳ್ಳವರಾಗಿಬೇಕು. ಭಾರೀ ಕನ್ನಡ ಪ್ರೇಮಿಯಾಗಿದ್ದು ಹಿಂದಿ ಮಾತನಾಡಲು ಬಾರದಿದ್ದರೂ ಪರವಾಗಿಲ್ಲ ಕನಿಷ್ಠ ಪಕ್ಷ ಇಂಗ್ಲಿಷ್ ಮಾತನಾಡಲು ಬಾರದಿರುವವ ಅಪ್ರಯೋಜನನೇ ಸರಿ. ಇಲ್ಲಿ ಶೋಕಿ ಮಾಡಿಕೊಂಡು ಅಲ್ಲಿ ಎರಡು ಅಕ್ಷರ ಉದುರಿಸದ, ಕನ್ನಡ ನಾಡಿನ ಆಶೋತ್ತರಗಳನ್ನು ಸಮರ್ಥವಾಗಿ ಎತ್ತಿಹಿಡಿಯದ ವ್ಯಕ್ತಿ ಅಲ್ಲಿರುವುದು ಬೇಡ ಇಲ್ಲಿಯೇ ಇರಲಿ. ಎಲ್ಲ ಸಂಸದರ ರಿಪೋರ್ಟ್ ಕಾರ್ಡ್ ಕೂಡ ಜನರ ಮುಂದೆಯೇ ಇದೆ. ಯಾರು ಎಷ್ಟು ಕೆಲಸ ಮಾಡಿದ್ದಾರೆಂಬ ತಿಳಿವಳಿಕೆಯೂ ಆತನಿಗಿದೆ.

ಪಕ್ಷ ನಿಷ್ಠೆಯ ಜಮಾನಾ ಎಂದೋ ಮುಗಿದುಹೋಗಿದೆ. ಪಕ್ಷದ ವರ್ಚಸ್ಸು, ಮುಖ ನೋಡಿ ಮತಹಾಕುವ ಕಾಲವಂತೂ ಅಲ್ಲವೇ ಅಲ್ಲ. ಇಂದೇನಿದ್ದರೂ ಚುನಾಯಿತನಾಗುವ ವ್ಯಕ್ತಿ ಮುಖ್ಯ. ಒಬ್ಬ ಸಮರ್ಥ ಪಕ್ಷೇತರನೂ ಸಂಸತ್ತಿನಲ್ಲಿ ಮತ್ತು ಸರಕಾರದಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸಬಲ್ಲ. ಇದು ಸಮ್ಮಿಶ್ರ ಸರಕಾರಗಳ ಯುಗ. ನಾಲ್ಕುನಾಲ್ಕು ರಂಗಗಳು ಉದ್ಭವವಾಗಿರುವುದರಿಂದ ಏಕೈಕ ರಾಷ್ಟ್ರೀಯ ಪಕ್ಷಕ್ಕೆ ಇನ್ನೆಂದೂ ಬಹುಮತ ಪಡೆಯುವ ಸಾಧ್ಯತೆ ಬರಲಾರದು. ಸಣ್ಣಪುಟ್ಟ ಪಕ್ಷಗಳು ಅಷ್ಟೇ ಏಕೆ ಒಬ್ಬಂಟಿ ಸಂಸದನೂ ಸರಕಾರವನ್ನು ಉಳಿಸುವಲ್ಲಿ ಅಥವಾ ಉರುಳಿಸುವಲ್ಲಿ ನಿರ್ಣಾಯಕ ಪಾತ್ರವಹಿಸಬಲ್ಲ. ಆದ್ದರಿಂದ ಸಮರ್ಥ ನಾಯಕನನ್ನು ನೋಡಿ ಜನ ಮತ ಹಾಕಬೇಕೆ ಹೊರತು ಪಕ್ಷ ನೋಡಿ ಅಲ್ಲ.

ನಮ್ಮ ಗ್ರಾಮೀಣ ಜನತೆಯಷ್ಟು ನಗರದ ಜನ ಮತದಾನಕ್ಕೆ ಸಂಬಂಧಿಸಿದಂತೆ ಜಾಗೃತರಾಗಿಲ್ಲವೆಂದೇ ಹೇಳಬೇಕು. ಹೆಚ್ಚು ಮತದಾನಗಳಾಗುವುದೇ ಗ್ರಾಮೀಣ ಪ್ರದೇಶಗಳಲ್ಲಿ. ನಯಾಪೈಸೆ ಕೆಲಸ ಮಾಡದ ಇಂಥವರಿಗೆ ಮತ ನೀಡುವುದಿಲ್ಲ ಎಂದು ದಂಗೆ ಏಳುವುದೂ ಹಳ್ಳಿಗರೇ. ಇಂದಿಲ್ಲದಿದ್ದರೆ ಇನ್ನೆಂದೂ ಇಲ್ಲ. ಪಟ್ಟಣಿಗರು ಎಚ್ಚೆತ್ತುಕೊಳ್ಳುವುದು ಒಳಿತು. ರಾಜ್ಯ ಉಚ್ಚ ನ್ಯಾಯಾಲಯ ಕೂಡ ಎಲ್ಲ ಸರಕಾರಿ ಸಂಸ್ಥೆಗಳು ಕಡ್ಡಾಯವಾಗಿ ಮತ ನೀಡಲು ರಜೆ ನೀಡಬೇಕೆಂದು ತಾಕೀತು ಮಾಡಿದೆ. ಜನ ಕೂಡ ರಜೆಯನ್ನು ಸದುಪಯೋಗಪಡಿಸಿಕೊಂಡು ಮತದಾನದ ಅರ್ಹತೆ ಪಡೆದಿರುವ ಎಲ್ಲರೂ ಜರೂರಾಗಿ ಮತ ಚಲಾಯಿಸಬೇಕು. ಇಂದಿನ ಪರಿಸ್ಥಿತಿಯಲ್ಲಿ ಒಂದೊಂದು ಮತವೂ ನಿರ್ಣಾಯಕವಾಗಬಲ್ಲದು. ನಂದೊಂದು ಮತವಿಲ್ಲದಿದ್ದರೆ ಏನೂ ವ್ಯತ್ಯಾಸವಾಗಲಾರದು ಎಂದು ಉದಾಸೀನ ತಾಳದೆ ಸಾಲುಗಟ್ಟಿ ಮತ ನೀಡಲೇಬೇಕು. ಇದು ಮತದಾರರಲ್ಲಿ ನಮ್ಮ ಕಳಕಳಿಯ ಆಗ್ರಹ ಕೂಡ.

ಈಗ ಹೇಳಿ, ನಿಮ್ಮ ಓಟು ಯಾರಿಗೆ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+