ಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್

ಶ್ರೀಲಂಕಾದಲ್ಲಿರುವ ತಮಿಳುರನ್ನು ರಕ್ಷಿಸಬೇಕು. ಅಲ್ಲದೇ ಶಾಶ್ವತ ಶಾಂತಿ ನೆಲೆಸುವ ಕುರಿತು ಒಪ್ಪಂದಕ್ಕೆ ಬರಬೇಕು ಎನ್ನುವುದು ಬಂದ್ ನ ಉದ್ದೇಶವಾಗಿದೆ. ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಶರಣಾಗತಿಗೆ ಲಂಕಾ ಸರ್ಕಾರ 24 ಗಂಟೆಗಳ ಗಡುವು ನೀಡಿತ್ತು. ಆದರೆ, ಗಡುವಿನೊಳಗೆ ಶರಣಾಗದಿದ್ದರಿಂದ ಲಂಕಾ ಸೇನಾ ಪಡೆ ತಮಿಳರು ಹೆಚ್ಚಿರುವ ನೆಲೆಗಳ ಕಾರ್ಯಾಚರಣೆ ಮುಂದುವರೆಸಿವೆ. ಈಗಾಗಲೇ ಸಾವಿರಾರು ತಮಿಳರು ಕಾರ್ಯಾಚರಣೆಯಲ್ಲಿ ಅಸುನೀಗಿದ್ದಾರೆ. ಸಾವಿರಾರು ತಮಿಳರನ್ನು ಲಂಕಾ ಸರ್ಕಾದ ಬಂಧಿಸಿದೆ.
ಈ ಮಧ್ಯ ಲಂಕಾದಲ್ಲಿ ನಡೆಯುತ್ತಿರುವ ಸೇನಾ ಕಾರ್ಯಾಚರಣೆಯನ್ನು ನಿಲ್ಲಿಸಲು ಅಲ್ಲಿನ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಕೇಂದ್ರದ ಮೇಲೆ ತೀವ್ರ ಒತ್ತಡ ಹೇರಿದ್ದಾರೆ. ಈ ಕುರಿತು ಪ್ರಧಾನಿ ಮನಮೋಹನ್ ಸಿಂಗ್, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ವಿದೇಶಾಂಗ ಸಚಿವ ಪ್ರಣವನ್ ಮುಖರ್ಜಿ ಅವರಿಗೆ ದೂರವಾಣಿ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ಸುಮಾರು 70 ಸಾವಿರಕ್ಕೂ ಅಧಿಕ ತಮಿಳು ನಾಗರಿಕರು ಎಲ್ ಟಿಟಿಇ ವಶದಲ್ಲಿರುವ ಪ್ರದೇಶವನ್ನು ಬಿಟ್ಟು ಹೊರನಡೆದಿದ್ದಾರೆ. ಕರಾವಳಿ ಪ್ರದೇಶದಲ್ಲಿ ಪ್ರಭಾಕರನ್ ಅವಿತುಕೊಂಡಿದ್ದಾನೆ ಎಂಬ ಮಾಹಿತಿ ಸೇನೆಗೆ ದೊರೆಕಿದ್ದು, ಯಾವ ಕ್ಷಣದಲ್ಲಾದರೂ ಆತನನ್ನು ಜೀವಂತ ಇಲ್ಲವೇ ಮೃತದೇಹವನ್ನು ಲಂಕಾ ಸರ್ಕಾರ ವಶಪಡಿಸಿಕೊಳ್ಳಬಹುದು. ಮಾಜಿ ಪ್ರಧಾನ ರಾಜೀವ ಗಾಂಧಿ ಛಿದ್ರಗೊಳಿಸಿದ್ದು, ಇದೇ ಉಗ್ರ ಪ್ರಭಾಕರನ್ ಹಾಗೂ ಸಂಗಡಿಗರು ಎನ್ನುವುದು ಭಾರತ ಎಂದಿಗೂ ಮರೆಯಲು ಸಾಧ್ಯವಿಲ್ಲ.
(ದಟ್ಸ್ ಕನ್ನಡ ವಾರ್ತೆ)
ತಮಿಳರನ್ನು ಉಳಿಸಲು ಕೇಂದ್ರಕ್ಕೆ ಕರುಣಾ ಒತ್ತಾಯ
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications