ಎಲ್ಟಿಟಿಇ ಉನ್ನತ ನಾಯಕರಿಬ್ಬರ ಶರಣಾಗತಿ
ಕೊಲಂಬೊ, ಏ. 22 : ಸೇನಾ ಕಾರ್ಯಾಚರಣೆ ನಡೆಸಿದ ಹಿನ್ನೆಲೆಯಲ್ಲಿ ಇಬ್ಬರು ಹಿರಿಯ ಎಲ್ಟಿಟಿಇಯ ನಾಯಕರು ಶರಣಾಗತರಾಗಿದ್ದಾರೆ೦ದು ಶ್ರೀಲಂಕಾ ಹೇಳಿಕೊಂಡಿದೆ. ಎಲ್ಟಿಟಿಇಯ ಮಾಧ್ಯಮ ಉಸ್ತುವಾರಿ ನೋಡಿಕೊಳ್ಳುತ್ತಿರುವ ದಯಾ ಮಾಸ್ಟರ್ ಮತ್ತು ಸಂಘಟನೆಯ ಹಿರಿಯ ಸದಸ್ಯ ಜಾರ್ಜ್ ಸೇನೆಯ ಮುಂದೆ ಶರಣಾಗುವ ಮೂಲಕ ಎಲ್ ಟಿಟಿಇ ಹೋರಾಟ ಅಂತ್ಯಗೊಳ್ಳುವ ಕಾಲ ಸಮೀಪಿಸುತ್ತಿದೆ. ದೇಶದ ಈಶಾನ್ಯ ಭಾಗದಲ್ಲಿರುವ ಸೇನೆಗೆ ಇಬ್ಬರು ಶರಣಾಗಿದ್ದಾರೆ.
ಎಲ್ಟಿಟಿಇ ಮುಖ್ಯಸ್ಥ ಪ್ರಭಾಕರನ್ ಶರಣಾಗತಿಗೆ ಶ್ರೀಲಂಕಾ ಸರಕಾರ ನೀಡಿದ್ದ ಗಡುವು ಮುಗಿದಿದ್ದರಿಂದ ಸೇನೆ ತೀವ್ರ ದಾಳಿ ಆರಂಭಿಸಿದ್ದು, ವ್ಯಾಘ್ರರ ಹತೋಟಿಯಲ್ಲಿದ್ದ ಇನ್ನಷ್ಟು ಪ್ರದೇಶಗಳನ್ನು ವಶಕ್ಕೆ ತೆಗೆದುಕೊಂಡಿದೆ. ಶ್ರೀಲಂಕಾ ಪಡೆಗಳು ಎಲ್ಟಿಟಿಇ ಉನ್ನತ ನಾಯಕರು ಅಡಗಿರಬಹುದೆ೦ದು ಶಂಕಿಸಲಾದ ಗುಂಡು ಹಾರಾಟ ನಿಷೇಧ ಪ್ರದೇಶದ ಪೂರ್ವ ತೀರಕ್ಕೆ ನುಗ್ಗಿದ್ದು, ಎಲ್ಟಿಟಿಇ ನಿಯಂತ್ರಣದಲ್ಲಿದ್ದ 17 ಕಿಮೀ ಪ್ರದೇಶವನ್ನು ಶ್ರೀಲಂಕಾ ಪಡೆಗಳು ಆಕ್ರಮಿಸಿಕೊಂಡಿವೆ.
ಸೇನೆಯ ದಾಳಿಯಿಂದ 1000 ಕ್ಕೂ ಹೆಚ್ಚು ನಾಗರಿಕರು ಸತ್ತಿದ್ದಾರೆಂದು ಶ್ರೀಲಂಕಾ ಬಂಡುಕೋರರು ಆರೋಪಿಸಿರುವುದನ್ನು ಅಲ್ಲಗೆಳೆದಿರುವ ಸೇನೆ ಸುಮಾರು 52,000 ನಾಗರಿಕರು ತಪ್ಪಿಸಿಕೊಂಡಿದ್ದಾರೆಂದು ಹೇಳಿದೆ.
(ದಟ್ಸ್ ಕನ್ನಡ ವಾರ್ತೆ)
ಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications