ಕರ್ತವ್ಯನಿರತ ಚುನಾವಣಾ ವೀಕ್ಷಣಾಧಿಕಾರಿಯ ಸಾವು
ಬೆಂಗಳೂರು, ಏ. 23 : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬರುವ ನೆಲಮಂಗಲ ತಾಲೂಕಿನ ಗೆದ್ದಲಹಳ್ಳಿಯಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಅಸುನೀಗಿದ ಘಟನೆ ಇಂದು ಜರುಗಿದೆ.
ಚುನಾವಣಾ ಆಯೋಗದ ಮೈಕ್ರೋ ವೀಕ್ಷಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಟಿಬಿ ಕೃಷ್ಣಪ್ಪ ಅವರು ಕರ್ತವ್ಯನಿರತರಾಗಿದ್ದಾಗಲೇ ಎದೆ ನೋವು ಬರುತ್ತಿರುವುದಾಗಿ ದೂರಿದರು. ಅವರನ್ನು ಆಸ್ಪತ್ರೆಗೆ ಸಾಗಿಸುವಾಗಲೇ ಮೃತರಾದರು.
ರಾಮನಗರ ಜಿಲ್ಲೆಯ ಕನಕಪುರದಲ್ಲಿ ಕಾರ್ಪೋರೇಷನ್ ಬ್ಯಾಂಕಿನಲ್ಲಿ ಅಧಿಕಾರಿಯಾಗಿ ಕೃಷ್ಣಪ್ಪ ಸೇವೆ ಸಲ್ಲಿಸುತ್ತಿದ್ದರು. ಅವರ ದೇಹವನ್ನು ರಾಮನಗರ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
(ಏಜೆನ್ಸೀಸ್)












Click it and Unblock the Notifications