ಹಕ್ಕು ಚಲಾಯಿಸಿದ ಕನ್ನಡದ ತಾರೆಯರು

ಮತ ಚಲಾಯಿಸಿದ ನಂತರ ನಟ-ನಟಿ ಹೇಳಿದ್ದೇನು
ರಮೇಶ ಅರವಿಂದ್ : ದೇಶದ ಅಭಿವೃದ್ದಿಗೆ ಎಲ್ಲರೂ ಮತ ನೀಡಬೇಕು. ಅದು ನಮ್ಮ ಹಕ್ಕು ಮತ್ತು ಕರ್ತವ್ಯ. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಪ್ರಮುಖ ಹುರಿಯಾಳುಗಳು ಉತ್ತಮ ನಾಯಕರೇ ಆಗಿದ್ದಾರೆ. ಇವರಲ್ಲಿ ಯಾರಿಗೆ ಮತ ನೀಡಬೇಕು ಎನ್ನುವುದು ಗೊಂದಲ ಸಂಗತಿಯಾಗಿತ್ತು. ಈ ಎಲ್ಲದರ ನಡುವೆ ಯೋಗ್ಯ, ಅಭಿವೃದ್ಧಿ ಪರ ಇರುವ ವ್ಯಕ್ತಿಗೆ ನನ್ನ ಮತ ನೀಡಿರುವೆ ಎಂದು ನಟ ರಮೇಶ್ ಅರವಿಂದ್ ಹೇಳಿದರು.
ಉಪೇಂದ್ರ : ರಿಯಲ್ ಸ್ಟಾರ್ ಉಪೇಂದ್ರ ರಿಯಲ್ ಆಗಿ ಮಾತನಾಡಿದರು. ಚುನಾವಣೆಗಾಗಿ ಜನಸಾಮಾನ್ಯರಿಗೆ ಸೇರಬೇಕಾಗಿರುವ ಕೋಟ್ಯಂತರ ರುಪಾಯಿ ಹಣ ವೆಚ್ಚ ಮಾಡುತ್ತಿರುವುದು ಬೇಸರದ ಸಂಗತಿ. ಭಾರತವನ್ನು ಕಟ್ಟುವ ಶಕ್ತಿ ಇರುವ ಈ ಮತವನ್ನು ಚಲಾಯಿಸಬೇಕು. ಪ್ರಜಾಪ್ರಭುತ್ವವನ್ನು ಒಪ್ಪಿಕೊಂಡಿರುವ ನಾವುಗಳು ಮತದಾನ ಮಾಡಲೇಬೇಕು. ಇದ್ದುದರಲ್ಲಿ ಉತ್ತಮರಿಗೆ ಮತ ನೀಡಿರುವೆ. ಕರ್ನಾಟಕದ ಎಲ್ಲರೂ ಕೂಡಾ ನಿಮ್ಮ ಹಕ್ಕು ತಪ್ಪದೇ ಚಲಾಯಿಸಿ ಎಂದು ಜನತೆಗೆ ಮನವಿ ಮಾಡಿಕೊಂಡರು.
ವಿಷ್ಣುವರ್ಧನ್ : ಜಯನಗರದ ನಾಲ್ಕನೇ ಹಂತದ ಮತಗಟ್ಟೆಯೊಂದರಲ್ಲಿ ಪತ್ನಿ ಭಾರತಿ ವಿಷ್ಣುವರ್ಧನ್ ಜೊತೆ ಆಗಮಿಸಿದ ಸಾಹಸಸಿಂಹ ತಮ್ಮ ಮತ ಚಲಾಯಿಸಿದರು. ಮತದಾನ ಶ್ರೇಷ್ಠ ಕೆಲಸ. ಇಂತಹ ಸುಸಮಯವನ್ನು ಯಾರೂ ಕಳೆದುಕೊಳ್ಳಬಾರದು. ನಮ್ಮನ್ನಾಳುವ ನಾಯಕರನ್ನು ಮತಗಳ ಮೂಲಕ ಆಯ್ಕೆ ಮಾಡಬೇಕು. ಅಭಿವೃದ್ಧಿ ಪರ ಹಾಗೂ ದೇಶದ ಹಿತ ಕಾಯುವ ಪಕ್ಷಕ್ಕೆ ಮತ ನೀಡಿರುವುದಾಗಿ ಹೇಳಿದರು.
ರಕ್ಷಿತಾ ಜಯನಗರದ ನಾಲ್ಕನೇ ಹಂತದಲ್ಲಿ ಮತ ಚಲಾಯಿಸಿ ಎಲ್ಲರೂ ಮತದಾನ ಮಾಡಬೇಕು ಎಂದು ಮನವಿ ಮಾಡಿಕೊಂಡರು. ಆದರೆ, ನಟಿ ರಮ್ಯ ಅವರು ಮತ ಚಲಾಯಿಸಲು ಸಾಧ್ಯವಾಗಲಿಲ್ಲ. ಸದಾಶಿವನಗರ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ನನ್ನ ಹೆಸರು ಮಾಯವಾಗಿದ್ದರಿಂದ ಬೇಸರದಿಂದ ಮನೆ ಕಡೆಗೆ ಹೆಜ್ಜೆ ಹಾಕಿದೆ ಎಂದು ರಮ್ಯ ಬೇಸರದಿಂದ ಹೇಳಿದರು.
(ದಟ್ಸ್ ಕನ್ನಡ ಸಿನಿಮಾ ವಾರ್ತೆ)
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications