ಹಕ್ಕು ಚಲಾಯಿಸಿದ ಕನ್ನಡದ ತಾರೆಯರು

ಮತ ಚಲಾಯಿಸಿದ ನಂತರ ನಟ-ನಟಿ ಹೇಳಿದ್ದೇನು
ರಮೇಶ ಅರವಿಂದ್ : ದೇಶದ ಅಭಿವೃದ್ದಿಗೆ ಎಲ್ಲರೂ ಮತ ನೀಡಬೇಕು. ಅದು ನಮ್ಮ ಹಕ್ಕು ಮತ್ತು ಕರ್ತವ್ಯ. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಪ್ರಮುಖ ಹುರಿಯಾಳುಗಳು ಉತ್ತಮ ನಾಯಕರೇ ಆಗಿದ್ದಾರೆ. ಇವರಲ್ಲಿ ಯಾರಿಗೆ ಮತ ನೀಡಬೇಕು ಎನ್ನುವುದು ಗೊಂದಲ ಸಂಗತಿಯಾಗಿತ್ತು. ಈ ಎಲ್ಲದರ ನಡುವೆ ಯೋಗ್ಯ, ಅಭಿವೃದ್ಧಿ ಪರ ಇರುವ ವ್ಯಕ್ತಿಗೆ ನನ್ನ ಮತ ನೀಡಿರುವೆ ಎಂದು ನಟ ರಮೇಶ್ ಅರವಿಂದ್ ಹೇಳಿದರು.
ಉಪೇಂದ್ರ : ರಿಯಲ್ ಸ್ಟಾರ್ ಉಪೇಂದ್ರ ರಿಯಲ್ ಆಗಿ ಮಾತನಾಡಿದರು. ಚುನಾವಣೆಗಾಗಿ ಜನಸಾಮಾನ್ಯರಿಗೆ ಸೇರಬೇಕಾಗಿರುವ ಕೋಟ್ಯಂತರ ರುಪಾಯಿ ಹಣ ವೆಚ್ಚ ಮಾಡುತ್ತಿರುವುದು ಬೇಸರದ ಸಂಗತಿ. ಭಾರತವನ್ನು ಕಟ್ಟುವ ಶಕ್ತಿ ಇರುವ ಈ ಮತವನ್ನು ಚಲಾಯಿಸಬೇಕು. ಪ್ರಜಾಪ್ರಭುತ್ವವನ್ನು ಒಪ್ಪಿಕೊಂಡಿರುವ ನಾವುಗಳು ಮತದಾನ ಮಾಡಲೇಬೇಕು. ಇದ್ದುದರಲ್ಲಿ ಉತ್ತಮರಿಗೆ ಮತ ನೀಡಿರುವೆ. ಕರ್ನಾಟಕದ ಎಲ್ಲರೂ ಕೂಡಾ ನಿಮ್ಮ ಹಕ್ಕು ತಪ್ಪದೇ ಚಲಾಯಿಸಿ ಎಂದು ಜನತೆಗೆ ಮನವಿ ಮಾಡಿಕೊಂಡರು.
ವಿಷ್ಣುವರ್ಧನ್ : ಜಯನಗರದ ನಾಲ್ಕನೇ ಹಂತದ ಮತಗಟ್ಟೆಯೊಂದರಲ್ಲಿ ಪತ್ನಿ ಭಾರತಿ ವಿಷ್ಣುವರ್ಧನ್ ಜೊತೆ ಆಗಮಿಸಿದ ಸಾಹಸಸಿಂಹ ತಮ್ಮ ಮತ ಚಲಾಯಿಸಿದರು. ಮತದಾನ ಶ್ರೇಷ್ಠ ಕೆಲಸ. ಇಂತಹ ಸುಸಮಯವನ್ನು ಯಾರೂ ಕಳೆದುಕೊಳ್ಳಬಾರದು. ನಮ್ಮನ್ನಾಳುವ ನಾಯಕರನ್ನು ಮತಗಳ ಮೂಲಕ ಆಯ್ಕೆ ಮಾಡಬೇಕು. ಅಭಿವೃದ್ಧಿ ಪರ ಹಾಗೂ ದೇಶದ ಹಿತ ಕಾಯುವ ಪಕ್ಷಕ್ಕೆ ಮತ ನೀಡಿರುವುದಾಗಿ ಹೇಳಿದರು.
ರಕ್ಷಿತಾ ಜಯನಗರದ ನಾಲ್ಕನೇ ಹಂತದಲ್ಲಿ ಮತ ಚಲಾಯಿಸಿ ಎಲ್ಲರೂ ಮತದಾನ ಮಾಡಬೇಕು ಎಂದು ಮನವಿ ಮಾಡಿಕೊಂಡರು. ಆದರೆ, ನಟಿ ರಮ್ಯ ಅವರು ಮತ ಚಲಾಯಿಸಲು ಸಾಧ್ಯವಾಗಲಿಲ್ಲ. ಸದಾಶಿವನಗರ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ನನ್ನ ಹೆಸರು ಮಾಯವಾಗಿದ್ದರಿಂದ ಬೇಸರದಿಂದ ಮನೆ ಕಡೆಗೆ ಹೆಜ್ಜೆ ಹಾಕಿದೆ ಎಂದು ರಮ್ಯ ಬೇಸರದಿಂದ ಹೇಳಿದರು.
(ದಟ್ಸ್ ಕನ್ನಡ ಸಿನಿಮಾ ವಾರ್ತೆ)
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications