ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಪಕ್ಷಕ್ಕೆ ಪ್ರಚಂಡ ವಿಜಯ : ಪ್ರಧಾನಿ

By Staff
|
Google Oneindia Kannada News

Manmohan Singh
ಗೌಹಾತಿ, ಏ. 23 : 15ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಬಹುಮತ ದೊರೆಯಲಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಪತ್ನಿ ಗುರುಶರಣ್ ಕೌರ್ ಸಮೇತ ಅಸ್ಸಾಂನ ದಿಸ್ ಪುರ್ ನ ಸರ್ಕಾರಿ ಶಾಲೆಯಲ್ಲಿ ತಮ್ಮ ಮತ ಚಲಾಯಿಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು.

ಚುನಾವಣೆ ನಂತರ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಉತ್ತರಿಸಲು ನಿರಾಕರಿಸಿದ ಪ್ರಧಾನಿ, ಸದ್ಯದ ಮಟ್ಟಿಗೆ ಆ ಬಗ್ಗೆ ಏನನ್ನೂ ಹೇಳಲು ಸಾಧ್ಯವಿಲ್ಲ. ಅಂದಿನ ಪರಿಸ್ಥಿತಿ ಕುರಿತು ಅವಲೋಕನ ಮಾಡಿದ ನಂತರ ಚಿಂತನೆ ನಡೆಸಲಾಗುವುದು. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ. ಒಂದಂತೂ ನಿಜ, ಈ ಬಾರಿ ಮತ್ತೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರ ಹಿಡಿಯುವುದು ಶತಸಿದ್ಧ ಎಂದು ಸಿಂಗ್ ಹೇಳಿದರು.

ಎರಡು ವರ್ಷ ನಂತರ ಮತ ಚಲಾಯಿಸಲು ಅಸ್ಸಾಂಗೆ ಪ್ರಧಾನಮಂತ್ರಿ ಆಗಮಿಸಿರುವ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ವಿಶೇಷ ವಿಮಾನದ ಮೂಲಕ ಅಸ್ಸಾಂ ತಲುಪಿದ ಸಿಂಗ್, ನಂತರ ಗೌಹಾತಿ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುವ ದಿಸ್ ಪುರ್ ನ ಮತಕೇಂದ್ರದಲ್ಲಿ ಮತ ಚಲಾಯಿಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X