ಕಾಂಗ್ರೆಸ್, ಬಿಜೆಪಿ ಬೆಂಬಲವಿಲ್ಲ : ಬಿಜೆಡಿ
ಭುವನೇಶ್ವರ್, ಏ. 23 : ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರ ರಚಿಸಲು ಬಿಜು ಜನತಾ ದಳ ಬೆಂಬಲ ನೀಡುವ ಮಾತೇ ಇಲ್ಲ ಎಂದು ಓರಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸ್ಪಷ್ಟಪಡಿಸಿದ್ದಾರೆ. ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್ ಹಾಗೂ ಬಿಜೆಪಿಯೇತರ ಸರ್ಕಾರ ರಚಿಸಲು ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.
ಓರಿಸ್ಸಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಡಿ ಸ್ಪಷ್ಟಬಹುಮತ ಗಳಿಸಲಿದೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಮಾತೇ ಇಲ್ಲ ಎಂದು ನವೀನ ಪಾಟ್ನಾಯಕ್ ಹೇಳಿದರು. ಕಳೆದ ವರ್ಷ ಕಂಧಮಾಲ್ ನಲ್ಲಿ ಹಿಂಸಾಚಾರಕ್ಕೆ ಬಿಜೆಪಿ ಕಾರಣ ಎಂದು ಆರೋಪಿಸಿದ ಅವರು, ಈ ಹಿನ್ನೆಲೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿಯನ್ನು ಕಡಿದುಕೊಂಡಿರುವುದಾಗಿ ಹೇಳಿದರು.
ಕಳೆದ 11 ವರ್ಷಗಳಿಂದ ಎನ್ ಡಿಎ ಒಕ್ಕೂಟದಲ್ಲಿ ಗುರುತಿಸಿಕೊಂಡಿದ್ದ ನವೀನ ಪಟ್ನಾಯಕ್ ಇತ್ತೀಚೆಗೆ ತೃತೀಯ ರಂಗಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಡಿ ಕೈಬಿಟ್ಟು ಹೋಗಿರುವುದರಿಂದ ಬಿಜೆಪಿ ಈ ಭಾಗದಲ್ಲಿ ಸ್ಲಲ್ಪ ಹಿನ್ನೆಡೆಯಾಗುವುದು ಸಾಧ್ಯತೆಯನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು