ಬಂಗಾರಪ್ಪ ಕೆಟ್ಟ ರಾಜಕಾರಣಿ : ಸಂಗಮೇಶ್

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಏಕವಚನದಲ್ಲಿ ಲಘುವಾಗಿ ಮಾತನಾಡಿದ್ದನ್ನು ಸಹಿಸದ ಬೆಂಬಲಿಗರು ಗಲಾಟೆ ನಡೆಸಿದರು ಎಂದರು. ಸ್ವಾರ್ಥಕ್ಕಾಗಿ ಪಕ್ಷಾಂತರ ಮಾಡಿದ ಬಂಗಾರಪ್ಪ ಇಂದು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾಗಿದ್ದಾರೆ. ಅಲ್ಪಸಂಖ್ಯಾತರನ್ನು ಖರೀದಿಸಿದಂತೆ ಮಾತನಾಡುತ್ತಿರುವ ಬಂಗಾರಪ್ಪ ಆ ಜನಾಂಗದ ಅಭಿವೃದ್ಧಿಗೆ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು. ಚುನಾವಣೆ ಸಂದರ್ಭದಲ್ಲಿ ಬರೀ ಸುಳ್ಳು ಹೇಳಿಕೊಂಡು ತಿರುಗಾಡುವ ಚಾಳಿಯನ್ನು ಬೆಳೆಸಿಕೊಂಡಿದ್ದಾರೆ ಎಂದು ಸಂಗಮೇಶ್ ದೂರಿದರು.
ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಬಂಗಾರಪ್ಪ ಹಾಗೂ ಶಾಸಕ ಸಂಗಮೇಶ್ ಬೆಂಬಲಿಗರ ನಡುವೆ ಭದ್ರಾವತಿಯಲ್ಲಿ ಗುರುವಾರ ಮಾರಾಮಾರಿ ನಡೆದಿತ್ತು. ಈ ವೇಳೆಯಲ್ಲಿ ಬಂಗಾರಪ್ಪ ಅವರ ಎದೆಗೆ ಕಲ್ಲೇಟು ಬಿದ್ದಿತ್ತು. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ನಾಲ್ವರು ಪತ್ರಕರ್ತರು, ಒಬ್ಬ ಮಹಿಳೆ ಗಾಯಗೊಂಡಿದ್ದರು.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು











Click it and Unblock the Notifications