ಖರಗ್ ಪುರ್ ಐಐಟಿ ವಿದ್ಯಾರ್ಥಿ ನೇಣಿಗೆ ಶರಣು
ಕೊಲ್ಕತ್ತಾ, ಏ. 24 : ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ಇಲ್ಲಿನ ಖರಗ್ ಪುರ್ ಐಐಟಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ವಸತಿ ನಿಲಯದ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗುರುವಾರ ನಡೆದಿದೆ.
ಆಂಧ್ರಪ್ರದೇಶ ಮೂಲದ ರಾಮಾನಂದ ರಾವ್ (22) ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದಾನೆ. ಕೆಮಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ರಾಮಾನಂದ್ ರಾವ್ ಅಂತಿಮ ಸೆಮಿಸ್ಟರ್ ನಲ್ಲಿ ಕಡಿಮೆ ಅಂಕಗಳನ್ನು ಪಡೆದುಕೊಂಡಿದ್ದ. ಇದರಿಂದ ತೀವ್ರವಾಗಿ ಮನನೊಂದು ವಸತಿ ನಿಲಯದ ಫ್ಯಾನ್ ಗೆ ನೇಣು ಹಾಕಿಕೊಂಡಿದ್ದಾನೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications