ನಿಷ್ಪ್ರಯೋಜಕ ಬಿಜೆಪಿ : ರಾಹುಲ್ ಗಾಂಧಿ

ನಂಜನಗೂಡಿನಲ್ಲಿ ಗುರುವಾರ ಮೈಸೂರು ಜಿಲ್ಲಾ ಕಾಂಗ್ರೆಸ್ ಏರ್ಪಡಿಸಿದ್ದ ಬಹಿರಂಗ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು. 2 ರುಪಾಯಿ ಕೆಜಿ ಅಕ್ಕಿ, 24 ಗಂಟೆ ಉಚಿತ ವಿದ್ಯುತ್ ಸೇರಿದಂತೆ ವಿವಿಧ ಭರವಸೆ ನೀಡಿದ ರಾಜ್ಯದ ಬಿಜೆಪಿ ಸರಕಾರ ತನ್ನೆಲ್ಲಾ ಭರವಸೆ ಈಡೇರಿಸಲು ವಿಫಲವಾಗಿದೆ. ಅಭಿವೃದ್ಧಿ ಕಾರ್ಯಗಳನ್ನು ಮರೆತಿರುವ ಸರಕಾರ, ಭಯೋತ್ಪಾದನೆ ನೆಪದಲ್ಲಿ ಕೇಂದ್ರ ಸರಕಾರದ ಮೇಲೆ ವಿನಾಕಾರಣ ಗೂಬೆ ಕೂರಿಸುವ ಕೆಲಸದಲ್ಲಿ ನಿರತವಾಗಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಭಯೋತ್ಪಾದನೆ ಹತ್ತಿಕ್ಕುವಲ್ಲಿ ವಿಫಲವಾಗಿದೆ ಎಂದು ಆರೋಪಿಸುತ್ತಿರುವ ಬಿಜೆಪಿ, ಕಂದಹಾರ್ ಪ್ರಕರಣದಲ್ಲಿ ಏಕೆ ಕೈಕಟ್ಟಿ ಕುಳಿತುಕೊಂಡಿತು. ಕಳೆದ 5 ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸಿದ ಯುಪಿಎ ಸರಕಾರ ದಲಿತರು, ಆದಿವಾಸಿಗಳು ಎಲ್ಲರನ್ನೂ ಸಮಾನವಾಗಿ ಕಂಡಿದೆ. ಯಾವುದೇ ಜಾತಿ, ಧರ್ಮದ ವ್ಯತ್ಯಾಸವಿಲ್ಲದೆ ಎಲ್ಲರ ಅಭಿವೃದ್ದಿಗೆ ಗಮನ ಹರಿಸಿದೆ. ಪ್ರತಿ ಭಾರತೀಯರನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಅಗತ್ಯವಿರುವ ಯೋಜನೆಗಳನ್ನು ಕಾರ್ಯಗತಗೊಳಿಸಿದೆ ಎಂದು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು












Click it and Unblock the Notifications