ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮೈಸೂರಿನಲ್ಲಿ ಏ.27ಕ್ಕೆ ಬಸವ ಜಯಂತಿ
ಮೈಸೂರು, ಏ. 25 : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಮಹಾನ್ ಮಾನವತಾವಾದಿ ಸಮಾಜ ಸುಧಾರಕ "ಜಗಜ್ಯೋತಿ ಬಸವೇಶ್ವರರ ಜನ್ಮದಿನೋತ್ಸವ" ಸಮಾರಂಭವನ್ನು ಏಪ್ರಿಲ್ 27ರಂದು ಬೆಳಿಗ್ಗೆ9.30ಕ್ಕೆ ಕಲಾಮಂದಿರದ ಒಳ ಆವರಣದಲ್ಲಿ ಏರ್ಪಡಿಸಲಾಗಿದೆ.
ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತೆ ಎಂ.ವಿ. ಜಯಂತಿ ಅವರು ಬಸವೇಶ್ವರರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು. ಈ ಸಮಾರಂಭಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ಸುಗೊಳಿಸಲು ಜಿಲ್ಲಾಧಿಕಾರಿಗಳು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರೂ ಆದ ಪಿ. ಮಣಿವಣ್ಣನ್ ಅವರು ಕೋರಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Saturday, April 25, 2009, 14:05 [IST]