ನಿವೃತ್ತ ವಾರ್ತಾ ಉಪ ನಿರ್ದೇಶಕ ರಾಜನ್ ನಿಧನ
ಬೆಂಗಳೂರು,
ಏ. 25 : ವಾರ್ತಾ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಎಸ್. ಹೆಚ್. ರಾಜನ್ ಅವರು ಇಂದು ಖಾಸಗಿ ಆಸ್ಪತ್ರೆಯೊಂದರಲ್ಲಿ ಗುರುವಾರ ನಿಧನರಾದರು. ಕೆಲಕಾಲದಿಂದ ಅಸ್ವಸ್ಥರಾಗಿದ್ದ ರಾಜನ್ ಅವರು ಪತ್ನಿ, ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. id="toptextpromo">ರಾಜನ್
ಅವರು ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಪ್ರಥಮ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಿದ್ದರಲ್ಲದೆ, ಕೋಲಾರ, ತುಮಕೂರು ಹಾಗೂ ಬೆಂಗಳೂರಿನಲ್ಲಿ ವಾರ್ತಾಧಿಕಾರಿಗಳಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಹಾಗೂ ಅವರ ಕುಟುಂಬದವರಿಗೆ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತನ್ನು ನೀಡಲಿ ಎಂದು ಅಬಕಾರಿ, ಐಟಿಬಿಟಿ, ವಾರ್ತಾ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ದು ಅವರು ಹಾರೈಸಿದ್ದಾರೆ. ವಾರ್ತಾ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ್ ಅವರು ಸಹ ರಾಜನ್ ನಿಧನಕ್ಕೆ ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications