ನಿವೃತ್ತ ವಾರ್ತಾ ಉಪ ನಿರ್ದೇಶಕ ರಾಜನ್ ನಿಧನ

ರಾಜನ್ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಪ್ರಥಮ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಿದ್ದರಲ್ಲದೆ, ಕೋಲಾರ, ತುಮಕೂರು ಹಾಗೂ ಬೆಂಗಳೂರಿನಲ್ಲಿ ವಾರ್ತಾಧಿಕಾರಿಗಳಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಹಾಗೂ ಅವರ ಕುಟುಂಬದವರಿಗೆ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತನ್ನು ನೀಡಲಿ ಎಂದು ಅಬಕಾರಿ, ಐಟಿಬಿಟಿ, ವಾರ್ತಾ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ದು ಅವರು ಹಾರೈಸಿದ್ದಾರೆ. ವಾರ್ತಾ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ್ ಅವರು ಸಹ ರಾಜನ್ ನಿಧನಕ್ಕೆ ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications