ತೃತೀಯ ರಂಗದ ವ್ಯಕ್ತಿಯೇ ಪ್ರಧಾನಿ : ದೇವೇಗೌಡ

ಹಾಸನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇಶದ ರಾಜಕಾರಣದಲ್ಲಿ ಸಾಕಷ್ಟು ವ್ಯತ್ಯಾಸವಾಗಿದೆ. ಈ ಬಾರಿ ದೇಶ ಅಚ್ಚರಿಯ ಫಲಿತಾಂಶ ಕಾಣಲಿದೆ ಎಂದರು. ತೃತೀಯ ರಂಗ ಅಧಿಕಾರಕ್ಕೆ ಬರುವುದು ನಿಶ್ಚಿತ. ಕಾಂಗ್ರೆಸ್ ಮತ್ತು ಬಿಜೆಪಿ ಹೊರತಾದ ಸರಕಾರ ರಚನೆಯಾಗಲಿದೆ. ಇದರಲ್ಲಿ ಯಾವುದೇ ಅನುಮಾನವೇ ಬೇಡ ಎಂದು ತಮ್ಮ ಅರ್ಧಶತಮಾನದ ರಾಜಕೀಯ ಜೀವನವನ್ನು ತೆರೆದಿಟ್ಟರು.
ರಾಜಕಾರಣ ಹೀನಾಯ ಸ್ಥಿತಿ ತಲುಪಿದೆ. ಹೀಗಾಗಿ ರಾಜಕೀಯ ಪಕ್ಷಗಳ ಭರವಸೆಯಿಂದ ಜನ ಬೇಸತ್ತಿದ್ದಾರೆ. ಹೊಸದನ್ನು ಬಯಸುತ್ತಿದ್ದಾರೆ. ಜನರೆದುರು ಇದುವರೆಗೂ ಪರ್ಯಾಯ ಇರಲಿಲ್ಲ. ಈ ಬಾರಿ ಚುನಾವಣೆಯಲ್ಲಿ ತೃತೀಯ ರಂಗ ಈ ಸ್ಥಾನ ತುಂಬುವ ಕೆಲಸ ಮಾಡಿದೆ. ಅದರಲ್ಲಿ ಯಶಸ್ವಿಯೂ ಆಗಲಿದೆ ಎಂದು ದೇವೇಗೌಡ ವಿಶ್ವಾಸದಿಂದ ನುಡಿದರು.
ದೇಶದಲ್ಲೀಗ ಕಾಂಗ್ರೆಸ್ ನಿಶ್ಯಕ್ತವಾಗಿದೆ. ಪಕ್ಷಕ್ಕೆ ಬಲ ತುಂಬುವ ವಾತಾವರಣವೇ ನಿರ್ಮಾಣ ಆಗಲಿಲ್ಲ. ಒಂದಡೆ ಲಾಲು ಕೈ ಬಿಟ್ಟರು. ಮುಲಾಮ್ ಸಿಂಗ್ ಯಾದವ್ ದೂರ ಸರಿದರು. ಇವರಲ್ಲದೆ ರಾಂವಿಲಾಸ್ ಪಾಸ್ವಾನ್, ಮಾಯಾವತಿ, ಶಿಬು ಸೊರೇನ್ ಕಾಂಗ್ರೆಸ್ ಜೊತೆಗಿಲ್ಲ. ಈಗ ನಡೆಯುತ್ತಿರುವ ಚುನಾವಣೆಯಲ್ಲಿ ಕೇರಳ ಹೊರತುಪಡಿಸಿದರೆ ಉಳಿದಂತೆ ಎಲ್ಲೂ ಕಾಂಗ್ರೆಸ್ ಗೆ ಬಹುಮತವಿಲ್ಲ. ಉತ್ತರ ಪ್ರದೇಶ, ಬಿಹಾರ, ತಮಿಳುನಾಡು, ಪಶ್ಚಿಮ ಬಂಗಾಲ, ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಬಲಹೀನಗೊಂಡಿದೆ. ಇವೆಲ್ಲವೂ ತೃತೀಯ ರಂಗಕ್ಕೆ ಪೂರಕ ವಾತಾವರಣ ನಿರ್ಮಿಸಿವೆ ಎಂದು ದೇವೇಗೌಡ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications