ಬಳ್ಳಾರಿ ರೆಡ್ಡಿ ಸಹೋದರರ ಗಣಿ ಗುತ್ತಿಗೆ ಅಮಾನತು

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಡಿಎಫ್ ಓ ಅವರ ಸಹಕಾರದಿಂದ ಅರಣ್ಯ ಸಂರಕ್ಷಣಾ ಕಾಯ್ದೆ, ಗಣಿ ಕಂಪನಿಗಳ ಸುರಕ್ಷಾ ವಲಯ ನಿಯಮ ಮತ್ತು ಗಡಿ ಭಾಗಗಳನ್ನು ಉಲ್ಲಂಘಿಸಿರುವ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಅಂತರರಾಜ್ಯದ ಗಡಿಭಾಗದಲ್ಲಿ ಆಂಧ್ರ ಸರ್ಕಾರವು ಓಬಳಾಪುರಂ ಮೈನಿಂಗ್ ಕಂಪನಿ (30.50 ಹೆಕ್ಟೇರ್ ಮತ್ತು 25.98 ಹೆಕ್ಟೇರ್), ಬಳ್ಳಾರಿ ಕಬ್ಬಿಣ ಅದಿರು ಕಂಪನಿ (27.12 ಹೆಕ್ಟೇರ್),ವೈ.ಮಹಾಬಲೇಶ್ವರಪ್ಪ ಅಂಡ್ ಸನ್ಸ್ (20.24 ಹೆಕ್ಟೇರ್) ಮತ್ತು ಅನಂತಪುರ ಮೈನಿಂಗ್ ಕಾರ್ಪೊರೇಷನ್ (6.5 ಹೆಕ್ಟೇರ್) ಕಂಪನಿಗಳ ಗುತ್ತಿಗೆಯನ್ನು ತಕ್ಷಣ ಅಮಾನತುಗೊಳಿಸಲು ಆದೇಶಿಸಲಾಗಿದೆ.
ಸಚಿವರ ಮಾಲೀಕತ್ವದ ಅಂತರರಾಜ್ಯ ಗಡಿ ಭಾಗದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪದ ಬಗ್ಗೆ ಸ್ಪಷ್ಟವಾಗಿ ತಿಳಿಯಲು ಭಾರತೀಯ ಸರ್ವೇ ಇಲಾಖೆಯಿಂದ ಸಮೀಕ್ಷೆ ನಡೆಯಬೇಕಿದೆ. ಗಡಿ ಗುರುತಿಸುವ ಪ್ರಕ್ರಿಯೆ ಅಂತ್ಯ ಗೊಳ್ಳುವವರೆಗೆ ಎಲ್ಲ ಐದು ಕಂಪನಿಗಳ ಗುತ್ತಿಗೆಗಳನ್ನು ಅಮಾನತಿನಲ್ಲಿ ಇಡಬೇಕು ಎಂದು ಕೇಂದ್ರ ಅರಣ್ಯ ಇಲಾಖೆ ಹಿರಿಯ ಸಹಾಯಕ ಐಜಿಪಿ ಬಿ.ಕೆ.ಸಿಂಗ್ ಬುಧವಾರ ಆಂಧ್ರಪ್ರದೇಶದ ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.
ಆದೇಶ ಹೊರಡಿಸಿದ 15 ದಿನಗಳ ಒಳಗಾಗಿ ತಮಗೆ ಕಾರ್ಯಪಾಲನಾ ವರದಿ ನೀಡಬೇಕು. ಸರಿಯಾಗಿ ಗಡಿಯನ್ನುಗುರುತಿಸದೇ ಗಣಿಗಾರಿಕೆಗೆ ಅವಕಾಶ ಮಾಡಿಕೊಟ್ಟ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಬಿ.ಕೆ.ಸಿಂಗ್ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications