ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಹಿತಿ ದೇಶ ಕುಲಕರ್ಣಿ ನಿಧನಕ್ಕೆ ಸಂತಾಪ

By Staff
|
Google Oneindia Kannada News

ಬೆಂಗಳೂರು, ಏ. 26: ಕನ್ನಡದ ಹಿರಿಯ ಕವಿ, ಕಥೆಗಾರ ಹಾಗೂ ವಿಮರ್ಶಕರಾಗಿ ಹೆಸರು ಮಾಡಿದ 71 ವರ್ಷ ವಯಸ್ಸಿನ ದೇಶ ಕುಲಕರ್ಣಿ ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕ ಪ್ರತಿಭಾನ್ವಿತ ಬರಹಗಾರರೊಬ್ಬರನ್ನು ಕಳೆದುಕೊಂಡಂತಾಗಿದೆ.

7 ಕವನ ಸಂಕಲನಗಳನ್ನು ಪ್ರಕಟಿಸಿರುವ ಇವರ ಕೂಡಿಕೊಂಡ ಸಾಲು ಕವನ ಸಂಕಲನ 1999ನೇ ಸಾಲಿನ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ ಪಡೆದುಕೊಂಡಿದೆ. ಇದಲ್ಲದೆ 2 ಕಥಾ ಸಂಕಲನಗಳು, 1 ನಾಟಕ ಮತ್ತು 3 ವಿಮರ್ಶಾ ಗ್ರಂಥಗಳು ಹಾಗೂ ಎರಡು ಸಂಪಾದಿತ ಕೃತಿಗಳನ್ನು ಪ್ರಕಟಿಸಿರುವ ಇವರು ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಆಳವಾದ ಅಭ್ಯಾಸ ಮಾಡಿದ್ದರು. ದೇಶ ಕುಲಕರ್ಣಿ ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದವರು. ಇವರ ನಿಧನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿಯು ಸಂತಾಪ ಸೂಚಿಸಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X