ತಮಿಳರ ಮೇಲೆ ದಾಳಿ ಖಂಡಿಸಿ ಕರುಣಾನಿಧಿ ಉಪವಾಸ
ಚೆನ್ನೈ, ಏ. 27 : ನಿಷೇಧಿತ ಭಯೋತ್ಪಾದಕ ಸಂಘಟನೆ ಹಾಗೂ ಭಾರತದ ಮಾಜಿ ಪ್ರಧಾನಿ ದಿವಂಗತ ರಾಜೀವ ಗಾಂಧಿ ಅವರನ್ನು ಛಿದ್ರ ಛಿದ್ರಗೊಳಿಸಿದ ಎಲ್ ಎಲ್ ಟಿಟಿಇ ಸಂಘಟನೆ ಪರವಾಗಿ ತಮಿಳುನಾಡು ಸರಕಾರ ಹೋರಾಟ ಆರಂಭಿಸಿದೆ. ಇಷ್ಟು ದಿನ ಕೇಂದ್ರ ಮೇಲೆ ಸಾಕಷ್ಟು ಒತ್ತಡ ಹೇರಿತ್ತಾದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಕೇಂದ್ರದ ಧೋರಣೆ ಹಾಗೂ ಲಂಕಾದಲ್ಲಿ ಎಲ್ ಟಿಟಿಇ ಮೇಲೆ ನಡೆಯುತ್ತಿರುವ ಮಾರಣಹೋಮ ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಇಂದು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಎಲ್ಟಿಟಿಇ ವಿರುದ್ಧ ಶ್ರೀಲಂಕಾ ಸೇನೆ ನಡೆಸುತ್ತಿರುವ ದಾಳಿಯನ್ನು ಈ ಕೂಡಲೇ ನಿಲ್ಲಸಬೇಕು ಎಂದು ಮಾಜಿ ಮುಖ್ಯಮಂತ್ರಿ ಅಣ್ಣಾದೊರೈ ಅವರ ಸ್ಮಾರಕಕ್ಕೆ ತೆರಳಿ, ಶ್ರೀಲಂಕಾದಲ್ಲಿ ಕದನ ವಿರಾಮ ಘೋಷಿಸಬೇಕು ಎಂದು ಒತ್ತಾಯಿಸಿ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದಾರೆ. ಕದನ ವಿರಾಮ ಘೋಷಿಸಲು ಶ್ರೀಲಂಕಾ ಸರಕಾರಕ್ಕೆ ಒತ್ತಡ ಹೇರಬೇಕೆಂದು ಕರುಣಾನಿಧಿ, ಕೇಂದ್ರ ಸರಕಾರಕ್ಕೆ ಕೆಲ ದಿನಗಳ ಹಿಂದೆ ತಂತಿ ಸಂದೇಶ ಮೂಲಕ ಒತ್ತಡ ಹೇರಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು "ನಾನೂ ಸಹ ಶ್ರೀಲಂಕ ಸರಕಾರದ ಬಲಿಪಶುವಾಗಲು ತಯಾರಿದ್ದೇನೆ, ಶ್ರೀಲಂಕಾ ಅಧ್ಯಕ್ಷ ರಾಜಪಕ್ಷೆ ನನ್ನನ್ನೂ ಸಾಯಿಸಲಿ ಎಂದು ಈ ಸಂದರ್ಭದಲ್ಲಿ ನುಡಿದರು.
ಡಿಎಂಕೆ ನಾಯಕರುಗಳು, ಅವರ ಪುತ್ರಿ ಕನಿಮೋಳಿ ಹಾಗೂ ಮೊಮ್ಮಗ ದಯಾನಿಧಿ ಮಾರನ್ ಮು೦ತಾದವರು ಉಪವಾಸ ಸ್ಥಳಕ್ಕೆ ಧಾವಿಸಿದ್ದಾರೆ. ಕರುಣಾನಿಧಿಯವರ ಏಕಾಏಕಿ ಉಪವಾಸದ ಸುದ್ದಿ ಕೇಳುತ್ತಲೇ, ಉಪವಾಸ ಹಿಂತೆಗೆಯಲು ಕೇಂದ್ರ ಸರ್ಕಾರ ಮನವಿ ಮಾಡಿದೆ. ಪ್ರಧಾನಿ ಮನಮೋಹನ್ ಸಿಂಗ್ ಅವರು ಕರುಣಾನಿಧಿ ಅವರೊಂದಿಗೆ ಮಾತನಾಡಿದ್ದಾರೆಂದು ತಿಳಿದುಬಂದಿದೆ.
(ದಟ್ಸ್ ಕನ್ನಡ ವಾರ್ತೆ)
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications