ಶ್ರೀಲಂಕಾ : ಸೇನಾ ಕಾರ್ಯಾಚರಣೆ ಅಂತ್ಯ
ಕೊಲಂಬೊ, ಏ. 27 : ಕಳೆದ ಒಂದು ವಾರದಿಂದ ಎಲ್ ಟಿಟಿಇ ವಿರುದ್ಧ ಶ್ರೀಲಂಕಾ ಸರಕಾರ ಆರಂಭಿಸಿದ್ದ ಸೇನಾ ಕಾರ್ಯಾಚರಣೆಯನ್ನು ಇಂದು ಕೊನೆಗೊಳಿಸಲಾಗಿದೆ ಎಂದು ಶ್ರೀಲಂಕಾ ಸರಕಾರ ಹೇಳಿದೆ. ಈ ಮಧ್ಯೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಾತಿಗೆ ಮಣಿದು ಅನಿರ್ದಿಷ್ಟಾವಧಿವರೆಗೆ ಹಮ್ಮಿಕೊಂಡಿದ್ದ ಉಪವಾಸವನ್ನು ಸತ್ಯಾಗ್ರಹ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಕೈಬಿಟ್ಟಿದ್ದಾರೆ.
ಎಲ್ ಟಿಟಿಇ ವಶದಲ್ಲಿರುವ ಬಹುತೇಕ ಪ್ರದೇಶದ ಶ್ರೀಲಂಕಾ ಸೇನೆ ನಡೆಸಿದ ಸೇನಾ ಕಾರ್ಯಾಚರಣೆ ಅಂತಿಮಗೊಂಡಿದೆ. ಅಲ್ಲದೇ ಎಲ್ ಟಿಟಿಇ ವಶದಲ್ಲಿದ್ದ ಪ್ರದೇಶಗಳನ್ನು ನಾವು ವಶಪಡಿಸಿಕೊಂಡಿದ್ದೇವೆ. ಅಮಾಯಕ ನಾಗರಿಕರ ರಕ್ಷಣೆಯ ದೃಷ್ಟಿಯಿಂದ ಕದನಕ್ಕೆ ವಿರಾಮ ಘೋಷಿಸಲಾಗಿದೆ ಎಂದು ಶ್ರೀಲಂಕಾ ಸರಕಾರ ಸ್ಪಷ್ಟಪಡಿಸಿದೆ. ಸೇನಾ ಕಾರ್ಯಾಚರಣೆಯಲ್ಲಿ ಅತಂತ್ರರಾಗಿರುವ ನಾಗರಿಕರಿಗೆ ಸರಕಾರ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರುಣಾನಿಧಿ ಉಪವಾಸ ಅಂತ್ಯ
ತಮಿಳರ ಮೇಲೆ ನಡೆಯುತ್ತಿರುವ ಸೇನಾ ಕಾರ್ಯಾಚರಣೆ ವಿರೋಧಿಸಿ ತಮಿಳನಾಡು ಮುಖ್ಯಮಂತ್ರಿ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೂರವಾಣಿ ಮೂಲಕ ಮಾಡಿಕೊಂಡ ಮನವಿ ಮಣಿದ ಕರುಣಾನಿಧಿ ಸತ್ಯಾಗ್ರಹ ಕೈಬಿಟ್ಟಿದ್ದಾರೆ. ಕೇಂದ್ರ ಸರಕಾರ ಶ್ರೀಲಂಕಾದಲ್ಲಿರುವ ತಮಿಳರ ರಕ್ಷಣೆ ಮುಂದಾಗಲಿದೆ. ಅಲ್ಲಿನ ಸರಕಾರಕ್ಕೆ ಸೇನಾ ಕಾರ್ಯಾಚರಣೆ ಕೈಬಿಡುವಂತೆ ಮನವಿ ಮಾಡಿಕೊಳ್ಳಲಾಗುವುದು ಎಂದು ಸೋನಿಯಾ ಗಾಂಧಿ ಭರವಸೆ ನೀಡಿದ ನಂತರ ಸತ್ಯಾಗ್ರಹ ಹಿಂತೆಗೆದುಕೊಳ್ಳಲಾಗಿದೆ ಎಂದು ಕರುಣಾನಿಧಿ ಸ್ಪಷ್ಟಪಡಿಸಿದ್ದಾರೆ.
(ಏಜನ್ಸೀಸ್)
ತಮಿಳರ ಮೇಲೆ ದಾಳಿ ಖಂಡಿಸಿ ಕರುಣಾನಿಧಿ ಉಪವಾಸ
ಸತ್ಯಾಗ್ರಹ ಕೈಬಿಡುವಂತೆ ಕರುಣಾಗೆ ಪಿಎಂ ಮನವಿ
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications