ಮೋದಿ ಪಾತ್ರದ ಬಗ್ಗೆ ತನಿಖೆ ನಡೆಸಿ: ಕೋರ್ಟ್

ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಈ ಸಂಬಂಧ ಮೂರು ತಿಂಗಳಲೊಳಗೆ ಸಂಪೂರ್ಣ ವರದಿ ನೀಡುವಂತೆ ರಾಘವನ್ ಸಮಿತಿಗೆ ಆದೇಶ ನೀಡಿದೆ. ಅಲ್ಲದೇ ಮೋದಿ ಸರಕಾರದಲ್ಲಿರುವ ಕ್ಯಾಬಿನೆಟ್ ಸಚಿವರ, ಮೂರು ಶಾಸಕರು, ಮೂರು ಮಂದಿ ವಿಶ್ವ ಹಿಂದೂ ಪರಷತ್ ಕಾರ್ಯಕರ್ತರು ಮತ್ತು ಹಲವಾರು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ವಿಚಾರಣೆಗೆ ಗುರಿಪಡಿಸುವ೦ತೆ ಆದೇಶ ನೀಡಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸಮಾಜ ಸೇವಕಿ ತೀಸ್ತಾ ಸೆಟತ್ವಾಡ್, ಇದು ನಮಗೆ ಆರಂಭಿಕ ಜಯ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದ ಏಳು ವರ್ಷಗಳ ನಂತರ ಮತ್ತೆ ವಿಚಾರಣೆ ನಡೆಸಲು ಮಾನ್ಯ ನ್ಯಾಯಾಲಯ ಅದೇಶ ನೀಡುವ ಮೂಲಕ ಮಾನವ ಹಕ್ಕುಗಳನ್ನು ಎತ್ತಿಹಿಡಿದಿದೆ. ಇದು ಗೋಧ್ರಾ ಹತ್ಯಾಕಾಂಡದಲ್ಲಿ ಮಡಿದವರಿಗೆ ಸದ್ಯದ ಜಯ ಎಂದು ಖಂಡಿತವಾಗಿ ಹೇಳಬಹುದು ಎಂದು ಅವರು ಹೇಳಿದ್ದಾರೆ.
ಇತ್ತೀಚೆಗೆ ಗುಜರಾತ ಭೇಟಿ ನೀಡಿದ್ದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಮೋದಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು. ಗುಜರಾತ ಐತಿಹಾಸಿಕವಾಗಿ ಭವ್ಯ ಇತಿಹಾಸವನ್ನು ಹೊಂದಿದೆ. ಆದರೆ, ಇಂದು ಕೋಮು ಶಕ್ತಿಗಳ ಕಪಿ ಮುಷ್ಠಿಯಲ್ಲಿ ನಲುಗತೊಡಗಿರುವುದು ದುರಂತ ಎಂದು ಟೀಕಿಸಿದ್ದರು. ಎನ್ ಡಿಎ ದೇಶ ವಿಭಜನೆಯಲ್ಲಿ ತೊಡಗಿದೆ. ಈ ಕಾರಣಕ್ಕಾಗಿ ಆ ಪಕ್ಷಕ್ಕೆ ಮತ ನೀಡಬೇಡಿ ಎಂದು ಪ್ರಧಾನಿ ಮತದಾರಲ್ಲಿ ಮನವಿ ಮಾಡಿಕೊಂಡಿದ್ದರು. 2002ರಲ್ಲಿ ಗೋಧ್ರಾ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 59 ಕರಸೇವಕರನ್ನು ಸಜೀವ ದಹನ ಮಾಡಲಾಗಿತ್ತು. ಆನಂತರ ಗುಜರಾತನಲ್ಲಿ ಭೀಕರ ಗಲಭೆಗಳು ಉಂಟಾದವು. ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ನಡೆದವು. ಆ ಘಟನೆಯಲ್ಲಿ ಮೋದಿ ಸರಕಾರದ ಕೈವಾಡವಿರುವ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ.
(ಏಜೆನ್ಸೀಸ್)
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications