ಅಂತರ್ಜಾತಿ ವಿವಾಹಕ್ಕೆ ಶ್ರೀರಾಮಸೇನೆ ಪೌರೋಹಿತ್ಯ
ಬೆಳಗಾವಿ, ಏ. 27 : ಪ್ರೇಮಿಗಳ ದಿನದಂದು ಪ್ರೇಮಿಗಳು ಕಂಡರೆ ಹಿಡಿದು ಮದುವೆ ಮಾಡಿಸುವುದಾಗಿ ಹೇಳಿ ತೀವ್ರ ಟೀಕೆ, ಆಕ್ರೋಶಕ್ಕೆ ಗುರಿಯಾಗಿದ್ದ ಶ್ರೀರಾಮಸೇನೆ, ಭಾನುವಾರ ಅಂತರ್ಜಾತಿಯ ವಿವಾಹಕ್ಕೆ ಪೌರೋಹಿತ್ಯ ವಹಿಸಿರುವುದು ವಿಶೇಷವಾಗಿದೆ.
ಇಲ್ಲಿನ ಟಿಳಕವಾಡಿ ದತ್ತ ಮಂದಿರದಲ್ಲಿ ಅವಮಾಸ್ಯೆಯಂದು ಈ ಅಂತರ್ಜಾತಿ ವಿವಾಹ ನಡೆದಿದೆ. ಇಂಜಿನಿಯರಿಂಗ್ ಪೂರೈಸಿರುವ ಕಣಬರಗಿಯ ಕುಮಾರ ಪೂಜಾರಿ (25) ಹಾಗೂ ವೈದ್ಯ ಶಿಕ್ಷಣ ಪೂರೈಸಿರುವ ಖುಶ್ಬೂ (23) ಹಿಂದೂ ಸಂಪ್ರದಾಯದಂತೆ ಸಪ್ತಪದಿಗೆ ಕಾಲಿಟ್ಟರು. ವಿವಾಹಕ್ಕೂ ಮೊದಲು ಆಕೆಯ ಹೆಸರನ್ನು ಲಾವಣ್ಯ ಎಂದು ನಾಮಕರಣ ಮಾಡಲಾಗಿದೆ.
ಕರ್ನಾಟಕ ವಿಶ್ವವಿದ್ಯಾಲಯದ ಭೂತರಾಯನಹಟ್ಟಿ ರಾಣಿ ಚೆನ್ನಮ್ಮ ಸ್ನಾತಕೋತ್ತರ ಕೇಂದ್ರದಲ್ಲಿ ಓದುತ್ತಿರುವಾಗ ಇವರಿಬ್ಬರ ನಡುವಿನ ಸ್ನೇಹ ಪ್ರೇಮಕ್ಕೆ ತಿರುಗಿತ್ತು. ವಿವಾಹಕ್ಕೆ ಇಬ್ಬರ ಮನೆಯಲ್ಲೂ ವಿರೋಧ ವ್ಯಕ್ತವಾಗಿತ್ತು. ಆಗ ಶ್ರೀರಾಮಸೇನೆ ಕಾರ್ಯಕರ್ತರಿಗೆ ತಮ್ಮ ಸಂಕಷ್ಟವನ್ನು ತಿಳಿಸಿದ ಪ್ರೇಮಿಗಳು, ಅವಮಾಸ್ಯೆಯಂದು ವಿವಾಹವಾದರು. ಕುಮಾರ್ ಅವರ ಪೋಷಕರು ಹಾಗೂ ಬಂಧುಗಳು ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೂ, ಖುಶ್ಬೂ ಪೋಷಕರು, ಬಂಧುಗಳು ಇರಲಿಲ್ಲ.
(ದಟ್ಸ್ ಕನ್ನಡ ವಾರ್ತೆ)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications