ಅಂತರ್ಜಾತಿ ವಿವಾಹಕ್ಕೆ ಶ್ರೀರಾಮಸೇನೆ ಪೌರೋಹಿತ್ಯ
ಬೆಳಗಾವಿ, ಏ. 27 : ಪ್ರೇಮಿಗಳ ದಿನದಂದು ಪ್ರೇಮಿಗಳು ಕಂಡರೆ ಹಿಡಿದು ಮದುವೆ ಮಾಡಿಸುವುದಾಗಿ ಹೇಳಿ ತೀವ್ರ ಟೀಕೆ, ಆಕ್ರೋಶಕ್ಕೆ ಗುರಿಯಾಗಿದ್ದ ಶ್ರೀರಾಮಸೇನೆ, ಭಾನುವಾರ ಅಂತರ್ಜಾತಿಯ ವಿವಾಹಕ್ಕೆ ಪೌರೋಹಿತ್ಯ ವಹಿಸಿರುವುದು ವಿಶೇಷವಾಗಿದೆ.
ಇಲ್ಲಿನ ಟಿಳಕವಾಡಿ ದತ್ತ ಮಂದಿರದಲ್ಲಿ ಅವಮಾಸ್ಯೆಯಂದು ಈ ಅಂತರ್ಜಾತಿ ವಿವಾಹ ನಡೆದಿದೆ. ಇಂಜಿನಿಯರಿಂಗ್ ಪೂರೈಸಿರುವ ಕಣಬರಗಿಯ ಕುಮಾರ ಪೂಜಾರಿ (25) ಹಾಗೂ ವೈದ್ಯ ಶಿಕ್ಷಣ ಪೂರೈಸಿರುವ ಖುಶ್ಬೂ (23) ಹಿಂದೂ ಸಂಪ್ರದಾಯದಂತೆ ಸಪ್ತಪದಿಗೆ ಕಾಲಿಟ್ಟರು. ವಿವಾಹಕ್ಕೂ ಮೊದಲು ಆಕೆಯ ಹೆಸರನ್ನು ಲಾವಣ್ಯ ಎಂದು ನಾಮಕರಣ ಮಾಡಲಾಗಿದೆ.
ಕರ್ನಾಟಕ ವಿಶ್ವವಿದ್ಯಾಲಯದ ಭೂತರಾಯನಹಟ್ಟಿ ರಾಣಿ ಚೆನ್ನಮ್ಮ ಸ್ನಾತಕೋತ್ತರ ಕೇಂದ್ರದಲ್ಲಿ ಓದುತ್ತಿರುವಾಗ ಇವರಿಬ್ಬರ ನಡುವಿನ ಸ್ನೇಹ ಪ್ರೇಮಕ್ಕೆ ತಿರುಗಿತ್ತು. ವಿವಾಹಕ್ಕೆ ಇಬ್ಬರ ಮನೆಯಲ್ಲೂ ವಿರೋಧ ವ್ಯಕ್ತವಾಗಿತ್ತು. ಆಗ ಶ್ರೀರಾಮಸೇನೆ ಕಾರ್ಯಕರ್ತರಿಗೆ ತಮ್ಮ ಸಂಕಷ್ಟವನ್ನು ತಿಳಿಸಿದ ಪ್ರೇಮಿಗಳು, ಅವಮಾಸ್ಯೆಯಂದು ವಿವಾಹವಾದರು. ಕುಮಾರ್ ಅವರ ಪೋಷಕರು ಹಾಗೂ ಬಂಧುಗಳು ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೂ, ಖುಶ್ಬೂ ಪೋಷಕರು, ಬಂಧುಗಳು ಇರಲಿಲ್ಲ.
(ದಟ್ಸ್ ಕನ್ನಡ ವಾರ್ತೆ)
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications