ಸಿಬಿಐ ಕಾರ್ಯವೈಖರಿಗೆ ಅಡ್ವಾಣಿ ತೀವ್ರ ಆಕ್ಷೇಪ
ಗಾಂಧಿನಗರ, ಏ, 28 : ಬೋಫೋರ್ಸ್ ಫಿರಂಗಿ ಹಗರಣಕ್ಕೆ ಸಂಬಂಧಿಸಿದಂತೆ ಇಟಲಿ ಮೂಲದ ಉದ್ಯಮಿದಾರ ಒಟ್ಟಾವಿಯೋ ಕ್ವಟ್ರೋಚಿ ಅವರಿಗೆ ಸಿಬಿಐ ಕ್ಲೀನ್ ಚಿಟ್ ನೀಡಿರುವುದಕ್ಕೆ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ, ಸ್ವತಂತ್ರ ಭಾರತ ಬಹುದೊಡ್ಡ ಹಗರಣ ಇದಾಗಿದ್ದು, ಕ್ಲೀನ್ ಚಿಟ್ ನೀಡಿರುವ ಸಿಬಿಐ ಕಾರ್ಯವೈಖರಿಯನ್ನು ಪ್ರಶ್ನಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಾಂಧಿನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಡ್ವಾಣಿ, ಸಿಬಿಐ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರದಲ್ಲಿ ಯುಪಿಎ ಸರಕಾರ ಅಧಿಕಾರ ಹಿಡಿದ ನಂತರ ಸಿಬಿಐ ಕಾರ್ಯವೈಖರಿ ತುಂಬ ಅನುಮಾನ ರೀತಿಯಲ್ಲಿ ನಡೆದುಕೊಂಡು ಬಂದಿದೆ. ರಾಜಕಾರಣಿಗಳ ಕೈಗೊಂಬೆಯಂತೆ ವರ್ತಿಸುತ್ತಿರುವ ಸಿಬಿಐನ ಕಳೆದ ಐದು ವರ್ಷಗಳ ಕಾರ್ಯವೈಖರಿಯನ್ನು ತನಿಖೆ ನಡೆಸಬೇಕಾದ ಅಗತ್ಯವಿದೆ ಅಡ್ವಾಣಿ ಹೇಳಿದರು.
ಬೋಫೋರ್ಸ್ ಹಗರಣದಿಂದ ಮುಖ್ಯ ಆರೋಪಿ ಕ್ವಟ್ರೋಚಿ ಅವರ ಹೆಸರನ್ನು ಕೈಬಿಟ್ಟಿರುವುದು ದೇಶಕ್ಕೆ ಮಾಡಿದ ಅವಮಾನ. 1997ರಲ್ಲಿಯೇ ಕ್ವಟ್ರೋಚಿ ಅರೋಪಿ ಎಂದು ಅವರನ್ನು ಬಂಧಿಸಲಾಗಿದೆ. ಆದರೂ ಕೂಡಾ ಸಿಬಿಐ ಕೇಂದ್ರ ಸರಕಾರ ಒತ್ತಡಕ್ಕೆ ಮಣಿದು ಕ್ವಟ್ರೋಚಿ ಅವರಿಗೆ ಕ್ಲೀನ್ ಚಿಟ್ ನೀಡಿದೆ ಎಂದು ಆರೋಪಿಸಿದರು. 1980ರ ದಶಕದಲ್ಲಿ ಬೋಫೋರ್ಸ್ ಹಗರಣ ಬೆಳಕಿಗೆ ಬಂದಿತು. 155 ಬಿಲಿಯನ್ ಹಣದ ಹಗರಣವಾಗಿದ್ದು, ಮಾಜಿ ಪ್ರಧಾನಿ ದಿವಂಗತ ರಾಜೀವ ಗಾಂಧಿ ಹಾಗೂ ದೇಶದ ಪ್ರಮುಖ ರಾಜಕಾರಣಿಗಳು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಬೋಫೋರ್ಸ್ ಹಗರಣ: ಕ್ವಟ್ರೋಚಿ ಆರೋಪ ಮುಕ್ತ
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications