Get Updates
Get notified of breaking news, exclusive insights, and must-see stories!

ಪಕ್ಷೇತರ ಸಚಿವರನ್ನು ಕೈಬಿಡಲ್ಲ:ವೆಂಕಟರಮಣಪ್ಪ

D Sudhakar
ದಾವಣಗೆರೆ, ಏ. 28 : ಲೋಕಸಭೆ ಚುನಾವಣೆ ನಂತರವೂ ರಾಜ್ಯ ಸಚಿವ ಸಂಪುಟದಲ್ಲಿ ಮುಂದುವರೆಯುವ ವಿಶ್ವಾಸವಿದೆ ಎಂದು ಸಣ್ಣ ಕೈಗಾರಿಕೆ ಸಚಿವ ವೆಂಕಟರಮಣಪ್ಪ ಹಾಗೂ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಹೇಳಿದರು. ಲೋಕಸಭೆ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾಗಲಿದೆ ಎಂದು ಎದ್ದಿರುವ ಗಾಳಿ ಸುದ್ದಿಗೆ ಉಭಯ ಸಚಿವರು ಈ ರೀತಿ ಪ್ರತಿಕ್ರಿಯೆ ನೀಡಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಖಾತೆಯಲ್ಲಿ ಮುಂದುವರೆಯುವ ವಿಶ್ವಾಸವಿದೆ ಎಂದರು. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರೆ ಸ್ಪಷ್ಟೀಕರಣ ನೀಡಿದ್ದು, ಚುನಾವಣೆ ನಂತರ ಸಚಿವ ಸಂಪುಟ ಪುನರ್ ರಚನೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಕೂಡಾ ಪಕ್ಷೇತರ ಸಚಿವರು ಬಿಜೆಪಿ ಸರಕಾರಕ್ಕೆ ಬೆಂಬಲ ನೀಡುತ್ತೇವೆ. ಇದರಲ್ಲಿ ಅನುಮಾನವೇ ಬೇಡ ಎಂದು ವೆಂಕಟರಮಣಪ್ಪ ಹೇಳಿದರು.

ಬಿಜೆಪಿ ಸರಕಾರ ರಚನೆಯಾಗಲು ಪಕ್ಷೇತರ ಶಾಸಕರಾದ ವೆಂಕಟರಮಣಪ್ಪ, ಡಿ ಸುಧಾಕರ್, ಶೇಖರ್ ಗೂಳಿಹಟ್ಟಿ ಮತ್ತು ಶಿವರಾಜ್ ತಂಗಡಗಿ ಅವರು ಬಿಜೆಪಿಗೆ ಬೆಂಬಲ ಘೋಷಿಸಿದ ಹಿನ್ನೆಲೆಯಲ್ಲಿ ಯಡಿಯೂರಪ್ಪ ನೇತೃತ್ವದ ನೂತನ ಸರಕಾರ ಅಸ್ತಿತ್ವಕ್ಕೆ ಬಂದಿತು. ಶಾಸಕ ವರ್ತೂರು ಪ್ರಕಾಶ್ ಕೂಡಾ ಬಿಜೆಪಿಗೆ ಬೆಂಬಲ ನೀಡಿ ನಿಗಮ-ಮಂಡಳಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. 110 ಸ್ಥಾನ ಪಡೆದಿದ್ದ ಬಿಜೆಪಿ, ಸರಕಾರ ರಚಿಸಲು 4 ಶಾಸಕ ಅವಶ್ಯಕತೆ ಇತ್ತು. ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಪಕ್ಷೇತರ ಶಾಸಕರು ಸರಕಾರಕ್ಕೆ ಬೆಂಬಲ ನೀಡಲು ಮುಂದೆ ಬಂದರು.

(ದಟ್ಸ್ ಕನ್ನಡ ವಾರ್ತೆ)
ಸಂಪುಟ ಪುನರ್ ರಚನೆ ಕೇವಲ ವದಂತಿ : ಬಿಎಸ್ ವೈ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+