ಜಂಟಿ ಸರ್ವೆ ನಡೆಸಲು ಕೇಂದ್ರ ಸಿಎಂ ಆಗ್ರಹ
ಬೆಂಗಳೂರು, ಏ. 28 : ಪ್ರವಾಸೋದ್ಯಮ ಸಚಿವ ಜನಾರ್ದನರೆಡ್ಡಿ ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮವಾಗಿ ಗಣಿಗಾರಿಕೆಗೆ ನಡೆಸಿದೆ ಎಂಬ ಆರೋಪದ ಮೇಲೆ ಈಗಲೇ ಕ್ರಮಕೈಗೊಳ್ಳಲು ಸಾಧ್ಯವಿಲ್ಲ. ಜಂಟಿ ಸರ್ವೆ ನಡೆಸುವಂತೆ ಕೇಂದ್ರ ಸರಕಾರ ಪತ್ರ ಬರೆದಿದ್ದು, ವರದಿ ಬಂದ ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಈ ವಿಷಯದಲ್ಲಿ ನಾನು ತಲೆ ಹಾಕುವುದಿಲ್ಲ. ಜಂಟಿ ಸರ್ವೆ ನಡೆಸಿದ ನಂತರ ಸತ್ಯಾಂಶ ತಿಳಿಯಲಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಐಎಎಸ್ ಅಧಿಕಾರಿ ನಂದಕುಮಾರ್ ಅವರು ಬಿಜೆಪಿ ಪರ ಹಣ ಹಂಚಿರುವ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅವರು. ಅವರು ತಮ್ಮ ಸಂಬಂಧಿಗಳನ್ನು ನೋಡುವ ಸಲುವಾಗಿ ಅನುಮತಿ ಪಡೆದು ಚಿಕ್ಕಮಗಳೂರಿಗೆ ಭೇಟಿ ನೀಡಿದ್ದಾರೆ ಎಂಬ ವಿಚಾರ ನನಗೆ ತಿಳಿದು ಬಂದಿದೆ. ನಾನು ಅವರನ್ನು ಯಾವುದೇ ಹಣ ಹಂಚಲೂ ಕಳುಹಿಸಿಲ್ಲ. ತಪ್ಪು ಮಾಡಿದರೆ ವಿಚಾರಣೆ ನಡೆಸಿ ಚುನಾವಣೆ ಆಯೋಗ ಕ್ರಮಕೈಗೊಳ್ಳತ್ತದೆ. ನಾನು ಯಾವುದೇ ಅಧಿಕಾರಿಯನ್ನೂ ರಕ್ಷಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
ಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ