ಭ್ರಮನಿರಸನಗೊಂಡು ಭಾರತಕ್ಕೆ ಮರಳಿದ 'ಕಿಂಗ್' ಖಾನ್

ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕಂತೂ ಇಂದಿನ ಪಂದ್ಯ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಣಮಿಸಿದೆ. ಗೆಲುವಿನ ಬರ ಎದುರಿಸುತ್ತಿರುವ ನೈಟ್ ರೈಡರ್ಸ್ ತಂಡದ ಮಾಲಿಕ ಕಿಂಗ್ ಶಾರುಖ್ ಖಾನ್ ತಂಡ ಗೆಲುವು ಸಾಧಿಸುವವರೆಗೆ ದಕ್ಷಿಣ ಆಫ್ರಿಕಾಕ್ಕೆ ಮರಳುವುದಿಲ್ಲ ಎಂದು ಪ್ರತಿಜ್ಞೆ ಮಾಡಿ ಭಾರತಕ್ಕೆ ಮರಳಿದ್ದಾರೆ. ರೈಡರ್ಸ್ ಸೋಲಿನಿಂದ ಖಾನ್ ಸಹಜವಾಗಿಯೇ ಭ್ರಮನಿರಸನಗೊಂಡಿದ್ದಾರೆ.
ಚಾಲೇಂಜರ್ಸ್ ಮತ್ತು ರೈಡರ್ಸ್ ಎರಡೂ ತಂಡಗಳು ಸೋಲು ಮಾತ್ರವಲ್ಲ ನಾಯಕತ್ವದ ಸಮಸ್ಯೆಯನ್ನೂ ಎದುರಿಸುತ್ತಿವೆ. ಚಾಲೇಂಜರ್ಸ್ ನಾಯಕ ಪೀಟರ್ಸನ್ ಮತ್ತು ರೈಡರ್ಸ್ ನಾಯಕ ಮೆಕಲಮ್ ದಯನೀಯವಾಗಿ ನಾಯಕತ್ವದಲ್ಲಿ ವೈಫಲ್ಯತೆ ಕಂಡಿದ್ದಾರೆ. ಗಾಯದ ಮೇಲೆ ಉಪ್ಪು ಸುರಿದಂತೆ ಪೀಟರ್ಸನ್ ಮತ್ತು ರೈಡರ್ಸ್ ತಂಡದ ಬಿರುಗಾಳಿಯ ಆಟಗಾರ ಕ್ರಿಸ್ ಗೇಯ್ಲ್ ಸಂಪೂರ್ಣ ವಿಫಲರಾಗಿದ್ದಾರೆ. ಮತ್ತು ಈ ಪಂದ್ಯದ ನಂತರ ಅವರಿಬ್ಬರೂ ಇಂಗ್ಲೆಂಡಿಗೆ ಮರಳಲಿದ್ದಾರೆ.
ಕೆವಿನ್ ನಂತರ ಯಾರು? : ಈ ಪ್ರಶ್ನೆಗೆ ವಿಜಯ್ ಮಲ್ಯ ಅವರಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ಪೀಟರ್ಸನ್ ಇಂಗ್ಲೆಂಡಿಗೆ ಮರಳುತ್ತಿರುವುದರಿಂದ ಹಿರಿಯ ಆಟಗಾರ ಜಾಕ್ ಕಾಲಿಸ್ ಅವರು ನಾಯಕತ್ವ ವಹಿಸುವುದಾಗಿ ಮಲ್ಯ ಹೇಳಿದ್ದರು. ಆದರೆ, ಕಾಲಿಸ್ ಕೂಡ ಲಯ ಕಂಡುಕೊಳ್ಳಲು ಒದ್ದಾಡುತ್ತಿದ್ದಾರೆ. ಇತ್ತ ಮಾಜಿ ನಾಯಕ ರಾಹುಲ್ ದ್ರಾವಿಡ್ ಎರಡನೇ ಮಗ ಹುಟ್ಟಿದ ಸಂಭ್ರಮದಲ್ಲಿದ್ದಾರೆ. ಕೀಪರ್ ಬೌಚರ್ ಮತ್ತು ಅನಿಲ್ ಕುಂಬ್ಳೆ ಕೂಡ ನಾಯಕತ್ವದ ಪರಿಗಣನೆಯಲ್ಲಿದ್ದಾರೆ.
ಒಟ್ಟಿನಲ್ಲಿ ಅಂಕಪಟ್ಟಿಯಲ್ಲಿ ಪಾತಾಳದಲ್ಲಿರುವ ಎರಡೂ ತಂಡಗಳ ಗ್ರಹಚಾರ ನೆಟ್ಟಗಿದ್ದಂತಿಲ್ಲ.
(ದಟ್ಸ್ ಕ್ರಿಕೆಟ್ ವಾರ್ತೆ)
ಪೂರಕ ಓದಿಗೆ
ಕೋಲ್ತತಾ ನೈಟ್ ರೈಡರ್ಸ್ ತಂಡದಲ್ಲಿ ಬಿರುಗಾಳಿ
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications