ಭ್ರಮನಿರಸನಗೊಂಡು ಭಾರತಕ್ಕೆ ಮರಳಿದ 'ಕಿಂಗ್' ಖಾನ್

ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕಂತೂ ಇಂದಿನ ಪಂದ್ಯ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಣಮಿಸಿದೆ. ಗೆಲುವಿನ ಬರ ಎದುರಿಸುತ್ತಿರುವ ನೈಟ್ ರೈಡರ್ಸ್ ತಂಡದ ಮಾಲಿಕ ಕಿಂಗ್ ಶಾರುಖ್ ಖಾನ್ ತಂಡ ಗೆಲುವು ಸಾಧಿಸುವವರೆಗೆ ದಕ್ಷಿಣ ಆಫ್ರಿಕಾಕ್ಕೆ ಮರಳುವುದಿಲ್ಲ ಎಂದು ಪ್ರತಿಜ್ಞೆ ಮಾಡಿ ಭಾರತಕ್ಕೆ ಮರಳಿದ್ದಾರೆ. ರೈಡರ್ಸ್ ಸೋಲಿನಿಂದ ಖಾನ್ ಸಹಜವಾಗಿಯೇ ಭ್ರಮನಿರಸನಗೊಂಡಿದ್ದಾರೆ.
ಚಾಲೇಂಜರ್ಸ್ ಮತ್ತು ರೈಡರ್ಸ್ ಎರಡೂ ತಂಡಗಳು ಸೋಲು ಮಾತ್ರವಲ್ಲ ನಾಯಕತ್ವದ ಸಮಸ್ಯೆಯನ್ನೂ ಎದುರಿಸುತ್ತಿವೆ. ಚಾಲೇಂಜರ್ಸ್ ನಾಯಕ ಪೀಟರ್ಸನ್ ಮತ್ತು ರೈಡರ್ಸ್ ನಾಯಕ ಮೆಕಲಮ್ ದಯನೀಯವಾಗಿ ನಾಯಕತ್ವದಲ್ಲಿ ವೈಫಲ್ಯತೆ ಕಂಡಿದ್ದಾರೆ. ಗಾಯದ ಮೇಲೆ ಉಪ್ಪು ಸುರಿದಂತೆ ಪೀಟರ್ಸನ್ ಮತ್ತು ರೈಡರ್ಸ್ ತಂಡದ ಬಿರುಗಾಳಿಯ ಆಟಗಾರ ಕ್ರಿಸ್ ಗೇಯ್ಲ್ ಸಂಪೂರ್ಣ ವಿಫಲರಾಗಿದ್ದಾರೆ. ಮತ್ತು ಈ ಪಂದ್ಯದ ನಂತರ ಅವರಿಬ್ಬರೂ ಇಂಗ್ಲೆಂಡಿಗೆ ಮರಳಲಿದ್ದಾರೆ.
ಕೆವಿನ್ ನಂತರ ಯಾರು? : ಈ ಪ್ರಶ್ನೆಗೆ ವಿಜಯ್ ಮಲ್ಯ ಅವರಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ಪೀಟರ್ಸನ್ ಇಂಗ್ಲೆಂಡಿಗೆ ಮರಳುತ್ತಿರುವುದರಿಂದ ಹಿರಿಯ ಆಟಗಾರ ಜಾಕ್ ಕಾಲಿಸ್ ಅವರು ನಾಯಕತ್ವ ವಹಿಸುವುದಾಗಿ ಮಲ್ಯ ಹೇಳಿದ್ದರು. ಆದರೆ, ಕಾಲಿಸ್ ಕೂಡ ಲಯ ಕಂಡುಕೊಳ್ಳಲು ಒದ್ದಾಡುತ್ತಿದ್ದಾರೆ. ಇತ್ತ ಮಾಜಿ ನಾಯಕ ರಾಹುಲ್ ದ್ರಾವಿಡ್ ಎರಡನೇ ಮಗ ಹುಟ್ಟಿದ ಸಂಭ್ರಮದಲ್ಲಿದ್ದಾರೆ. ಕೀಪರ್ ಬೌಚರ್ ಮತ್ತು ಅನಿಲ್ ಕುಂಬ್ಳೆ ಕೂಡ ನಾಯಕತ್ವದ ಪರಿಗಣನೆಯಲ್ಲಿದ್ದಾರೆ.
ಒಟ್ಟಿನಲ್ಲಿ ಅಂಕಪಟ್ಟಿಯಲ್ಲಿ ಪಾತಾಳದಲ್ಲಿರುವ ಎರಡೂ ತಂಡಗಳ ಗ್ರಹಚಾರ ನೆಟ್ಟಗಿದ್ದಂತಿಲ್ಲ.
(ದಟ್ಸ್ ಕ್ರಿಕೆಟ್ ವಾರ್ತೆ)
ಪೂರಕ ಓದಿಗೆ
ಕೋಲ್ತತಾ ನೈಟ್ ರೈಡರ್ಸ್ ತಂಡದಲ್ಲಿ ಬಿರುಗಾಳಿ
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications