ಭಾರತಕ್ಕೆ ಕಾಲಿಡಲು ತವಕಿಸುತ್ತಿರುವ ಎಲ್ ಟಿಟಿಇ ?
ನವದೆಹಲಿ, ಏ. 29 : ನೆರೆಯ ಶ್ರೀಲಂಕಾದಲ್ಲಿ ಭಯೋತ್ಪಾದಕ ಸಂಘಟನೆ ಎಲ್ ಟಿಟಿಇ ತನ್ನ ನೆಲೆ ಕಳೆದುಕೊಳ್ಳುತ್ತಿರುವ ಬೆನ್ನಲ್ಲೇ ಭಾರತಕ್ಕೆ ಹೊಸ ಆತಂಕವನ್ನು ತಂದೊಡ್ಡಿದೆ. ಲಂಕಾ ಸರಕಾರದ ಸೇನಾ ಕಾರ್ಯಾಚರಣೆಯಲ್ಲಿ ಮೂಲೆಗುಂಪಾಗುತ್ತಿರುವ ಎಲ್ ಟಿಟಿಇ ಸಂಘಟನೆ ಭಾರತದಲ್ಲಿ ತನ್ನ ಗೂಡು ಕಟ್ಟುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಕೇಂದ್ರವನ್ನು ಸರಕಾರವನ್ನು ಎಚ್ಚರಿಸಿದೆ.
ಅಳಿದುಳಿದ ಎಲ್ ಟಿಟಿಇ ಬಂಡುಕೋರರನ್ನು ಬಗ್ಗುಬಡಿಯಲು ಲಂಕಾ ಸೇನೆ ಮುನ್ನುಗ್ಗುತ್ತಿರುವಾಗಲೇ ಭಾರತದಲ್ಲಿ ಎಲ್ ಟಿಟಿಇ ಭಯೋತ್ಪಾದಕ ಕೃತ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನಡೆಸುವ ಸಾಧ್ಯತೆ ಇದೆ ಎಂದು ಕೂಡಾ ಇಲಾಖೆ ತಿಳಿಸಿದೆ. ಒಂದೆಡೆ ಎಲ್ ಟಿಟಿಇ ಬೆದರಿಕೆ ಕ್ರಮಕೈಗೊಳ್ಳುವ ಹಂತದಲ್ಲಿಯೇ, ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲದ ಉಗ್ರರ ನುಸುಳುವಿಕೆಯೂ ಕಳೆದ 13 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಹೆಚ್ಚಿರುವುದು ಆತಂಕಕ್ಕೆ ಕಾರಣವಾಗಿದೆ.
ಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಬಗ್ಗೆ ಮತ್ತು ಆತನ ಬಳಿ ಇರುವ ಆಪ್ತರ ಬಗ್ಗೆ ಬಾರತ ಸರಕಾರದ ಬಳಿ ಯಾವುದೇ ಮಾಹಿತಿ ಇಲ್ಲ ಎಂದು ಮೂಲಗಳು ತಿಳಿಸಿವೆ. ಭಾರತ ಸರಕಾರದ ಬಳಿ ಲಭ್ಯ ಮಾಹಿತಿ ಪ್ರಕಾರ, ಎಲ್ ಟಿಟಿಇ ನಿಯಂತ್ರಣದ ಪ್ರದೇಶದಿಂದ 1.65 ಲಕ್ಷದಷ್ಟು ತಮಿಳು ನಿರಾಶ್ರಿತರು ಪರಿಹಾರ ಶಿಬಿರಕ್ಕೆ ಆಗಮಿಸಿದ್ದಾರೆ. ಇನ್ನೂ 5 ರಿಂದ 20 ಸಾವಿರದಷ್ಟು ತಮಿಳರು ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿಕೊಂಡಿದ್ದಾರೆಂದು ಅಂದಾಜಿಸಲಾಗಿದೆ. ದೇಶದಲ್ಲಿ ಲೋಕಸಭೆ ಚುನಾವಣೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಎಲ್ ಟಿಟಿಇ ಉಗ್ರರು, ಪಾಕಿ ಉಗ್ರರು ತೀವ್ರ ತಲೆನೋವಾಗಿ ಪರಿಣಮಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications