'ಎರಡನೇ ಹಂತದಲ್ಲಿ ಬಿಜೆಪಿಗೆ 8 ರಿಂದ 9 ಸ್ಥಾನಗಳು'

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, 11 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಏನಿಲ್ಲ ಎಂದರೂ 8 ರಿಂದ 9 ಸ್ಥಾನಗಳಲ್ಲಿ ಅಧಿಪತ್ಯ ಸಾಧಿಸಲಿದೆ ಎಂದರು. ಶಿವಮೊಗ್ಗ ಕ್ಷೇತ್ರದಲ್ಲಿ ಬಂಗಾರಪ್ಪ ವಿರುದ್ಧ ಬಿ.ವೈ ರಾಘವೇಂದ್ರ ಕಣಕ್ಕಿಳಿದಿರುವುದು ಗೊತ್ತೇ ಇದೆ.
ಎರಡನೇ ಹಂತದ ಚುನಾವಣೆ 11 ಲೋಕಸಭೆ ಕ್ಷೇತ್ರಗಳಲ್ಲಿ ನಡೆಯುತ್ತಿದ್ದು ಕಣದಲ್ಲಿ ಒಟ್ಟು 156 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಇವರಲ್ಲಿ ಒಟ್ಟು 93 ಅಭ್ಯರ್ಥಿಗಳು ಪಕ್ಷೇತರರು. ದಾವಣಗೆರೆ ಲೋಕಸಭೆ ಕ್ಷೇತ್ರದಿಂದ 22 ಮಂದಿ ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಬಾಗಲಕೋಟೆಯಲ್ಲಿ 12 ಮಂದಿ ಪಕ್ಷೇತರರು ಸ್ಪರ್ಧಿಸಿದ್ದಾರೆ. ಪ್ರತಿಷ್ಠಿತ ಕ್ಷೇತ್ರವಾಗಿರುವ ಹಾಸನದಲ್ಲಿ ದೇವಗೌಡರೊಂದಿಗೆ 9 ಮಂದಿ ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
ಯಡಿಯೂರಪ್ಪ ಬಲಗೈ ಬೆರಳಿಗೆ ಇಂಕು ಯಾಕಪ್ಪ?












Click it and Unblock the Notifications