ದೇವೇಗೌಡ, ಬಂಗಾರಪ್ಪ, ರಾಘು ಮತ ಚಲಾವಣೆ
ಬೆಂಗಳೂರು, ಏ. 30: ರಾಜ್ಯದ ಎರಡನೇ ಹಾಗೂ ಅಂತಿಮ ಮತದಾನ ಪ್ರಕ್ರಿಯೆ 11 ಲೋಕಸಭೆ ಕ್ಷೇತ್ರದಲ್ಲಿ ಆರಂಭವಾಗಿದೆ. ಇಂದು ಬೆಳಗ್ಗೆ 7 ರಿಂದ ಆರಂಭವಾದ ಮತದಾನ ಸಂಜೆ 5 ಗಂಟೆಗೆ ಕೊನೆಗೊಳ್ಳಲಿದೆ.
ಮೈಸೂರು ನಲ್ಲಿ ರಾಮದಾಸ್, ತನ್ವೀರ್ ಸೇಠ್, ಉಡುಪಿಯಲ್ಲಿ ಆಸ್ಕರ್ ಫರ್ನಾಂಡಿಸ್, ವಿಎಸ್ ಆಚಾರ್ಯ, ಪೇಜಾವರ ಶ್ರೀಗಳಿಂದ ಮತ ಚಲಾವಣೆ, ಶಿಕಾರಿಪುರದಲ್ಲಿ ಯಡಿಯೂರಪ್ಪ, ಬಿವೈ ರಾಘವೇಂದ್ರ ಸೇರಿದಂತೆ ಸಿಎಂ ಕುಟುಂಬದವರು, ಶಿವಮೊಗ್ಗದಲ್ಲಿ ಡಿಎಚ್ ಶಂಕರಮೂರ್ತಿ, ಮಂಗಳೂರಿನಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತದಾನ ಮಾಡಿದರು. ಚಾಮುಂಡೇಶ್ವರಿ ಕ್ಷೇತ್ರದ ಕೆಲ ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ. ದಾವಣಗೆರೆಯಲ್ಲಿ ಮತಗಟ್ಟೆ ಬದಲಾವಣೆ. ಚಿಕ್ಕಮಗಳೂರಿನ 3 ಗ್ರಾಮಗಳಿಂದ ಮತದಾನ ಬಹಿಷ್ಕಾರ ಹಾಕಿದ್ದಾರೆ.
ಶೇಕಡಾವಾರು ಮತದಾನ ಮೊದಲ ಎರಡು ಗಂಟೆಗಳಲ್ಲಿ
ಮೈಸೂರು 8%
ಬಾಗಲಕೋಟೆ 8%
ದಾವಣಗೆರೆ 6%
ಹಾವೇರಿ 7%
ಉಡುಪಿ -ಚಿಕ್ಕಮಗಳೂರು 9%
ದಕ್ಷಿಣ ಕನ್ನಡ 9 %
ಮಂಡ್ಯ 12%
ಶಿವಮೊಗ್ಗ 9%
ದಕ್ಷಿಣ ಕನ್ನಡ 9%
ಚಾಮರಾಜ ನಗರ 7%
ಹಾಸನ 9%
ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ, ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ, ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ, ಚಿತ್ರನಟ ಅಂಬರೀಷ್, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗ ಬಿ ವೈ ರಾಘವೇಂದ್ರ ಸೇರಿ 11 ಲೋಕಸಭೆ ಕ್ಷೇತ್ರದಲ್ಲಿ ಒಟ್ಟು 153 ಅಭ್ಯರ್ಥಿಗಳ ಅಗ್ನಿಪರೀಕ್ಷೆ ಆರಂಭವಾಗಿದೆ.
ಚಾಮರಾಜನಗರ, ಹಾವೇರಿ, ಬಾಗಲಕೋಟೆ, ಮೈಸೂರು, ಮಂಡ್ಯ, ಹಾಸನ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ ಹಾಗೂ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಗುರುವಾರ ಮತದಾನ ನಡೆಯಲಿದೆ. ಒಟ್ಟು 15.5 ಕೋಟಿ ಮಂದಿ ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಅದರಲ್ಲಿ 7.67 ಕೋಟಿ ಮಹಿಳಾ ಮತದಾರರಿದ್ದಾರೆ. 11 ಕ್ಷೇತ್ರಗಳಲ್ಲಿ 18,426 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ 2,951 ಅತಿಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದೆ. 55 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಧಿಕಾರಿಗಳು ಸೇರಿ 50 ಸಾವಿರಕ್ಕೂ ಹೆಚ್ಚು ಸರ್ಕಾರಿ ಸಿಬ್ಬಂದಿ ಮತದಾನದ ಉಸ್ತುವಾರಿಯನ್ನು ವಹಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications