ಧರ್ಮಸ್ಥಳದಲ್ಲಿ ಆಂಧ್ರ ಪೊಲೀಸರ ಪುಂಡಾಟಿಕೆ

ಆಂಧ್ರ ಪೊಲೀಸರ ಗುಂಡಿನ ದಾಳಿಗೆ ಸಾವಪ್ಪಿದವರನ್ನು ಐತಪ್ಪ ಎಂದು ಗುರುತಿಸಲಾಗಿದೆ. ಉದಯ್ ಎಂಬ ವ್ಯಕ್ತಿಯ ಕಾಲಿಗೆ ಗುಂಡು ತಗುಲಿ ಗಾಯಗೊಂಡಿದ್ದು ಇನ್ನೂ ಮೂರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ15ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಸ್ಥಳೀಯರ ಆಕ್ರೋಶ ಮುಗಿಲು ಮುಟ್ಟಿದೆ.
ಘಟನೆ ಹೇಗೆ ನಡೆಯಿತು?
ಬೆಳ್ತಂಗಡಿ ಸೇರಿದಂತೆ ಕರ್ನಾಟಕದ ನಕ್ಸಲ್ ಪೀಡಿತ ಪ್ರದೇಶಗಳ ಸಂದರ್ಶನಕ್ಕೆ 90 ಮಂದಿ ಸಿಆರ್ ಪಿಎಫ್ ಪೊಲೀಸರು ಆಗಮಿಸಿದ್ದರು. ಇವರು ಇಂದು ಧರ್ಮಸ್ಥಳದ ದೇವಸ್ಥಾನಕ್ಕೆ ಆಗಮಿಸಿ ಹಿಂತಿರುಗುತ್ತಿರಬೇಕಾದರೆ ದೇವಸ್ಥಾನದ ಎದುರಿನಲ್ಲಿದ್ದ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಮಕ್ಕಳ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಕುಪಿತಗೊಂಡ ಸಿಆರ್ ಪಿಎಫ್ ಪೊಲೀಸರು 15ಕ್ಕೂ ಹೆಚ್ಚು ಮಕ್ಕಳಿಗೆ ಏಕಾಏಕಿ ಲಾಠಿ ಪ್ರಹಾರ ಮಾಡಿದರು. ಇದನ್ನು ತಡೆಯಲು ಸ್ಥಳೀಯರು ಮಧ್ಯ ಪ್ರವೇಶಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು.
ನಂತರ ಮದ್ಯದ ಅಮಲಿನಲ್ಲಿದ್ದ ಪೊಲೀಸರು ಎಕೆ47 ಬಂದೂಕಿನಿಂದ ಗುಂಡು ಹಾರಿಸಿದರು. ಈ ಘಟನೆಯಲ್ಲಿ ಐತಪ್ಪ ಎಂಬ ವ್ಯಕ್ತಿಗೆ ಗುಂಡು ತಗುಲಿ ಸ್ಥಳದಲ್ಲೇ ಸಾವಪ್ಪಿದ. ಮತ್ತೊಬ್ಬ ಸ್ಥಳೀಯ ಉದಯ್ ಎಂಬುವವರ ಕಾಲಿಗೆ ಗುಂಡು ತಗುಲಿದೆ. ಮೂರು ಮಂದಿ ಸ್ಥಳೀಯರು ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಯಿಂದ ಕುಪಿತಗೊಂಡಿರುವ ಸ್ಥಳೀಯರು ಸಿಆರ್ ಪಿಎಫ್ ಪೊಲೀಸರ ಎರಡು ವಾಹನಗಳಿಗೆ ಮುತ್ತಿಗೆ ಹಾಕಿದರು. ಧರ್ಮಸ್ಥಳದಲ್ಲಿ ಪರಿಸ್ಥಿತಿ ಈಗ ಬಿಗುವಿನಿಂದ ಕೂಡಿದೆ.
ಮಂಗಳೂರು ಜಿಲ್ಲಾಧಿಕಾರಿ ವಿ ಪೊನ್ನುರಾಜ್ ಘಟನಾ ಸ್ಥಳಕ್ಕೆ ಆಗಮಿಸಿದ್ದು ಪರಿಸ್ಥಿತಿಯನ್ನು ತಿಳಿಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಧರ್ಮಸ್ಥಳದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಅಹಿತಕರ ಘಟನೆ ನಡೆಯುತ್ತಿರುವುದು. ಜಿಲ್ಲಾಧಿಕಾರಿಗಳು ಸಿಆರ್ ಪಿಎಫ್ ಪೊಲೀಸರ ಬಳಿ ಇರುವ ಗನ್ ಗಳನ್ನು ಮುಟ್ಟುಗೋಲು ಹಾಕಲು ನಿರ್ಧರಿಸಿದ್ದಾರೆ. ನಾಲ್ಕು ಸಾವಿರಕ್ಕೂ ಹೆಚ್ಚಿನ ಸ್ಥಳೀಯರು ಜಮಾಯಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications