ಧರ್ಮಸ್ಥಳದಲ್ಲಿ ಆಂಧ್ರ ಪೊಲೀಸರ ಪುಂಡಾಟಿಕೆ

ಆಂಧ್ರ ಪೊಲೀಸರ ಗುಂಡಿನ ದಾಳಿಗೆ ಸಾವಪ್ಪಿದವರನ್ನು ಐತಪ್ಪ ಎಂದು ಗುರುತಿಸಲಾಗಿದೆ. ಉದಯ್ ಎಂಬ ವ್ಯಕ್ತಿಯ ಕಾಲಿಗೆ ಗುಂಡು ತಗುಲಿ ಗಾಯಗೊಂಡಿದ್ದು ಇನ್ನೂ ಮೂರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ15ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಸ್ಥಳೀಯರ ಆಕ್ರೋಶ ಮುಗಿಲು ಮುಟ್ಟಿದೆ.
ಘಟನೆ ಹೇಗೆ ನಡೆಯಿತು?
ಬೆಳ್ತಂಗಡಿ ಸೇರಿದಂತೆ ಕರ್ನಾಟಕದ ನಕ್ಸಲ್ ಪೀಡಿತ ಪ್ರದೇಶಗಳ ಸಂದರ್ಶನಕ್ಕೆ 90 ಮಂದಿ ಸಿಆರ್ ಪಿಎಫ್ ಪೊಲೀಸರು ಆಗಮಿಸಿದ್ದರು. ಇವರು ಇಂದು ಧರ್ಮಸ್ಥಳದ ದೇವಸ್ಥಾನಕ್ಕೆ ಆಗಮಿಸಿ ಹಿಂತಿರುಗುತ್ತಿರಬೇಕಾದರೆ ದೇವಸ್ಥಾನದ ಎದುರಿನಲ್ಲಿದ್ದ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಮಕ್ಕಳ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಕುಪಿತಗೊಂಡ ಸಿಆರ್ ಪಿಎಫ್ ಪೊಲೀಸರು 15ಕ್ಕೂ ಹೆಚ್ಚು ಮಕ್ಕಳಿಗೆ ಏಕಾಏಕಿ ಲಾಠಿ ಪ್ರಹಾರ ಮಾಡಿದರು. ಇದನ್ನು ತಡೆಯಲು ಸ್ಥಳೀಯರು ಮಧ್ಯ ಪ್ರವೇಶಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು.
ನಂತರ ಮದ್ಯದ ಅಮಲಿನಲ್ಲಿದ್ದ ಪೊಲೀಸರು ಎಕೆ47 ಬಂದೂಕಿನಿಂದ ಗುಂಡು ಹಾರಿಸಿದರು. ಈ ಘಟನೆಯಲ್ಲಿ ಐತಪ್ಪ ಎಂಬ ವ್ಯಕ್ತಿಗೆ ಗುಂಡು ತಗುಲಿ ಸ್ಥಳದಲ್ಲೇ ಸಾವಪ್ಪಿದ. ಮತ್ತೊಬ್ಬ ಸ್ಥಳೀಯ ಉದಯ್ ಎಂಬುವವರ ಕಾಲಿಗೆ ಗುಂಡು ತಗುಲಿದೆ. ಮೂರು ಮಂದಿ ಸ್ಥಳೀಯರು ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಯಿಂದ ಕುಪಿತಗೊಂಡಿರುವ ಸ್ಥಳೀಯರು ಸಿಆರ್ ಪಿಎಫ್ ಪೊಲೀಸರ ಎರಡು ವಾಹನಗಳಿಗೆ ಮುತ್ತಿಗೆ ಹಾಕಿದರು. ಧರ್ಮಸ್ಥಳದಲ್ಲಿ ಪರಿಸ್ಥಿತಿ ಈಗ ಬಿಗುವಿನಿಂದ ಕೂಡಿದೆ.
ಮಂಗಳೂರು ಜಿಲ್ಲಾಧಿಕಾರಿ ವಿ ಪೊನ್ನುರಾಜ್ ಘಟನಾ ಸ್ಥಳಕ್ಕೆ ಆಗಮಿಸಿದ್ದು ಪರಿಸ್ಥಿತಿಯನ್ನು ತಿಳಿಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಧರ್ಮಸ್ಥಳದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಅಹಿತಕರ ಘಟನೆ ನಡೆಯುತ್ತಿರುವುದು. ಜಿಲ್ಲಾಧಿಕಾರಿಗಳು ಸಿಆರ್ ಪಿಎಫ್ ಪೊಲೀಸರ ಬಳಿ ಇರುವ ಗನ್ ಗಳನ್ನು ಮುಟ್ಟುಗೋಲು ಹಾಕಲು ನಿರ್ಧರಿಸಿದ್ದಾರೆ. ನಾಲ್ಕು ಸಾವಿರಕ್ಕೂ ಹೆಚ್ಚಿನ ಸ್ಥಳೀಯರು ಜಮಾಯಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications