ಹಗರಿಬೊಮ್ಮನಹಳ್ಳಿಯಲ್ಲಿ ಗಾಳಿಯಲ್ಲಿ ಗುಂಡು
ಬಳ್ಳ್ಳಾರಿ, ಮೇ.2: ಹಗರಿಬೊಮ್ಮನಹಳ್ಳಿಯಲ್ಲಿ ಪ್ರೇಮ ವ್ಯವಹಾರಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ನಡುವೆ ಉದ್ವಿಘ್ನ ಪರಿಸ್ಥಿತಿ ಉಂಟಾಗಿತ್ತು. ಕಡೆಗೆ ಗುಂಪು ಘರ್ಷಣೆಯಲ್ಲಿ ತೊಡಗಿದ್ದ ಎರಡು ಕೋಮುಗಳನ್ನು ಚದುರಿಸಲು ಪೊಲೀಸರು ಮಧ್ಯ ಪ್ರವೇಶಿಸಿ ಲಾಠಿ ಪ್ರಹಾರ ಮಾಡಬೇಕಾಯಿತು. ಅದಕ್ಕೂ ಜಗ್ಗದಿದ್ದಾಗ ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು.
ಕಲ್ಲು ತೂರಾಟದ ಕಾರಣ ಸರ್ಕಲ್ ಇನ್ಸ್ ಪೆಕ್ಟರ್ ಸೇರಿದಂತೆ ಸುಮಾರು 15 ಮಂದಿ ಗಾಯಗೊಂಡಿದ್ದಾರೆ. ಹತ್ತು ಬೈಕ್ ಗಳು, ಪೊಲೀಸ್ ವಾಹನ ಸೇರಿದಂತೆ ಮೂರು ಕಾರುಗಳು ಜಖಂ ಆಗಿವೆ. ತಹಸೀಲ್ದಾರರ ವಾಹನವೂ ಜಖಂಗೊಂಡಿದೆ. ಯುವತಿಯೊಂದಿಗೆ ಸಂಬಂಧ ಇದೆ ಎಂಬ ಹಿನ್ನೆಲೆಯಲ್ಲಿ ಹುಡುಗಿ ಕಡೆಯ ಸಂಬಂಧಿಕರು ಹುಡುಗನ ಮನೆ ಮುಂದೆ ಜಮಾಯಿಸಿ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು. ಮಾತಿನ ಚಕಮಕಿ ತಾರಕಕ್ಕೇರಿತೀವ್ರ ಸ್ವರೂಪ ಪಡೆದುಕೊಂಡು ಗುಂಪು ಘರ್ಷಣೆಗೆ ಕಾರಣವಾಯಿತು.
ಎರಡು ವಿಭಿನ್ನ ಕೋಮುಗಳಿಗೆ ಸೇರಿದ ಹುಡುಗ ಮತ್ತು ಹುಡುಗಿ ಕೆಲ ದಿನಗಳಿಂದ ನಾಪತ್ತೆಯಾಗಿದ್ದರು.ಈ ಬಗ್ಗೆ ಇಲ್ಲಸಲ್ಲದ ಅನುಮಾನಗಳು ಎರಡು ಕೋಮುಗಳ ಗುಂಪು ಘರ್ಷಣೆಗೆ ಕಾರಣ ಎನ್ನಲಾಗಿದೆ. ನಂತರ ನಾಪತ್ತೆಯಾದ ಹುಡುಗಿ ಹುಡುಗ ತಮ್ಮ ತಮ್ಮ ಮನೆಗಳಿಗೆ ಮರಳಿದ್ದಾರೆ. ಆದರೆ ಹುಡುಗಿ ಕಡೆಯವರನ್ನು ಹುಡುಗ ಅವಹೇಳನಕಾರಿಯಾಗಿ ನಿಂದಿಸಿದ್ದೇ ಇಷ್ಟೆಲ್ಲಾ ರದ್ದಾಂತಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ರೊಚ್ಚಿಗೆದ್ದ ಗಲಭೆ ಕೋರರು ಒಬ್ಬರ ಮೇಲೊಬ್ಬರು ಕಲ್ಲು ತೂರಾಟದಲ್ಲಿ ತೊಡಗಿದರು. ಇದರಿಂದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳು ಜಖಂಗೊಂಡವು.
(ದಟ್ಸ್ ಕನ್ನಡ ವಾರ್ತೆ)
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications