ಎರಡು ಜೋಡಿ ಯುವಪ್ರೇಮಿಗಳ ದುರಂತ ಅಂತ್ಯ

ಎರಡೂ ಘಟನೆಗಳಲ್ಲಿ ಸಾಮ್ಯತೆಯೇನೆಂದರೆ ಎರಡೂ ಜೋಡಿಗಳು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅದರಲ್ಲಿ ಒಂದು ಜೋಡಿ ಬಾರ್ಕೂರಿನಲ್ಲಿ ಸತ್ತಿದ್ದರೆ, ಇನ್ನೊಂದು ಜೋಡಿ ಬದುಕುಳಿದೂ ಸತ್ತಂತಾಗಿದ್ದಾರೆ. ದುರಾದೃಷ್ಟವೆಂದರೆ, ಯುವಪ್ರೇಮಿಗಳು ರೈಲಿನ ಒಂದು ಹಳಿಯಂತಾದರೆ, ಮದುವೆಗೆ ಆಕ್ಷೇಪಿಸಿದ ಹಿರಿಯರು ಇನ್ನೊಂದು ಹಳಿಯಾಗಿದ್ದಾರೆ.
ಗುಲಬರ್ಗಾ ಜೋಡಿ : ಗುಲಬರ್ಗಾ ಜಿಲ್ಲೆಯ ಆಳಂದದ ಶ್ರೀಕಾಂತ್ ಮತ್ತು ನಾಗವೇಣಿ ಒಬ್ಬರನ್ನೊಬ್ಬರು ಮೆಚ್ಚಿಕೊಂಡು ಮದುವೆಯಾಗಬಯಸಿದ್ದರು. ಅವರ ಮದುವೆಗೆ ಹಿರಿಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮದುವೆಗೆ ಹಿರಿಯರ ಅನುಮತಿ ದೊರೆಯುವುದಿಲ್ಲವೆನ್ನುವುದನ್ನು ಅರಿತ ಯುವಪ್ರೇಮಿಗಳು ಮದುವೆಯಾಗಿ ಹೊಸಜೀವನ ನಡೆಸಲು ಬೆಂಗಳೂರಿಗೆ ಬಂದಿದ್ದಾರೆ. ತಾವೊಂದು ಬಗೆದರೆ ದೈವವೊಂದು ಬಗೆಯಿತು ಎಂಬಂತೆ ಮದುವೆಗೆ ವಿಘ್ನ ಎದುರಾಗಿದೆ.
ಬದುಕಿ ಪ್ರಯೋಜನವಿಲ್ಲವೆಂದು ನಿನ್ನೆ ರಾತ್ರಿ ಮಂಗಳಾ ಎಕ್ಸ್ ಪ್ರೆಸ್ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಳ್ಳಲು ಇಬ್ಬರೂ ನಿರ್ಧರಿಸಿದ್ದಾರೆ. ಆದರೆ, ಕೊನೆ ಗಳಿಗೆಯಲ್ಲಿ ಮನಸು ಬದಲಾಯಿಸಿದ್ದಾರೆ. ಅಷ್ಟರಲ್ಲಿ ಶ್ರೀಕಾಂತನ ಕಾಲು ರೈಲು ಹಳಿ ಮಧ್ಯ ಸಿಕ್ಕಿಕೊಂಡಿದ್ದರಿಂದ ರೈಲು ಆತನ ಮೇಲೆ ಹರಿದು ಎರಡೂ ಕಾಲುಗಳು ಕತ್ತರಿಸಿವೆ. ನಾಗವೇಣಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾಳೆ. ಈಗ ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆತ್ಮಹತ್ಯೆಗೆ ಯತ್ನಿಸಿದ ಕಾರಣಕ್ಕಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಬಾರ್ಕೂರು ಜೋಡಿ : ಬಾರ್ಕೂರಿನ ಇನ್ನೊಂದು ಯುವಪ್ರೇಮಿಗಳಾದ ರಾಘವೇಂದ್ರ ಮತ್ತು ಸುಷ್ಮಾ ಅವರು ಕೂಡ ತಮ್ಮ ಮದುವೆಗೆ ಎರಡೂ ಕುಟುಂಬದ ಹಿರಿಯಲು ಅಡ್ಡಬಂದಿದ್ದರಿಂದ ಬಾರ್ಕೂರಿನಲ್ಲಿ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರ ದೇಹಗಳು ಛಿದ್ರಛಿದ್ರವಾಗಿವೆ. ಸುಷ್ಮಾ ಇನ್ನೂ ಪ್ರಾಪ್ತವಯಸ್ಕಳಾಗಿರಲಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಬ್ರಹ್ಮಾವರದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications