ಹಂದಿಜ್ವರ ತಡೆಗೆ ಅಗತ್ಯ ಕ್ರಮ : ಅಶೋಕ್
ಬೆಂಗಳೂರು, ಮೇ. 4 : ವಿಶ್ವದಾದ್ಯಂತ ಹಂದಿಜ್ವರ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರಕಾರ ಸೂಕ್ತ ಕ್ರಮಕೊಂಡಿದೆ. ಪ್ರತಿ ದಿನ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 1200 ಪ್ರಯಾಣಿಕರು ನಗರಕ್ಕೆ ಆಗಮಿಸುತ್ತಿದ್ದು, ಅವರನ್ನು ತಪಾಸಣೆ ಮಾಡುವ ವ್ಯವಸ್ಥೆಯನ್ನು ಆರಂಭಿಸಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರೋಗ್ಯ ಇಲಾಖೆ ಕಾರ್ಯದರ್ಶಿ ಎಂ ಮದನಗೋಪಾಲ್, ಹಂದಿಜ್ವರದ ತಡೆಯುವ ನಿಟ್ಟಿನಲ್ಲಿ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸರಕಾರಿ ಆಸ್ಪತ್ರೆ ಹಾಗೂ ಕೆಲವು ಖಾಸಗಿ ಆಸ್ಪತ್ರೆಗಳು ಕೂಡಾ ಹಂದಿಜ್ವರ ತಡೆಯಲು ಕೈಜೋಡಿಸಿವೆ ಎಂದು ಹೇಳಿದ್ದಾರೆ. ಏಪ್ರಿಲ್ 20 ರಿಂದ ಈಚೆಗೆ ಬೆಂಗಳೂರು ಆಗಮಿಸಿರುವ ಪ್ರಯಾಣಿಕರ ಪಟ್ಟಿಯನ್ನು ಇಮ್ಮಿಗ್ರೇಷನ್ ಇಲಾಖೆಯಿಂದ ಪಡೆದುಕೊಳ್ಳಲಾಗಿದೆ.
ಈ ಎಲ್ಲ ಪ್ರಯಾಣಿಕರ ತಪಾಸಣೆಯನ್ನು ಶೀಘ್ರದಲ್ಲಿ ನಡೆಸಲಾಗುವುದು ಎಂದು ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಾರಿಗೆ ಸಚಿವ ಆರ್ ಅಶೋಕ್ ಹೇಳಿದರು. ಏಪ್ರಿಲ್ 28 ರಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 28 ಮಂದಿ ನುರಿತ ವೈದ್ಯರ ತಂಡ ಪ್ರಯಾಣಿಕರನ್ನು ತಪಾಸಣೆ ನಡೆಸಿದೆ ಎಂದು ಅವರು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಹಂದಿಜ್ವರ : 1000 ಪ್ರಕರಣ ಬೆಳಕಿಗೆ, 20 ಸಾವು












Click it and Unblock the Notifications