ಕೊಲೆ ಪ್ರಕರಣ : 2 ಅಧಿಕಾರಿಗಳು ಅಮಾನತು

ಹರಿಹರ, ಮೇ. 4 : ಇತ್ತೀಚೆಗೆ ರಾಜ್ಯದಲ್ಲಿ ನಡೆದ ಎರಡನೇ ಹಂತದ ಲೋಕಸಭೆ ಚುನಾವಣೆ ಪ್ರಚಾರ ಕಾರ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಮಾರಾಮಾರಿ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸೆದಿದ ಆರೋಪದ ಮೇಲೆ ಹರಿಹರದ ಇಬ್ಬರು ಅಧಿಕಾರಿಗಳನ್ನು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಪಾಟೀಲ್ ಅಮಾನತುಗೊಳಿಸಿದ್ದಾರೆ.

ವಿಜಯಕುಮಾರ್ ಕೊಂಡಜ್ಜಿ (52) ಅವರು ಕಳೆದ ಕೆಲ ದಿನಗಳಿಂದ ಹಿಂದೆಯೇ ತನ್ನ ಜೀವಕ್ಕೆ ಅಪಾಯವಿದೆ. ಆದ್ದರಿಂದ ಸೂಕ್ತ ಪೊಲೀಸ್ ರಕ್ಷಣೆ ನೀಡಿ ಎಂದು ಅವರು ಮನವಿ ಮಾಡಿಕೊಂಡಿದ್ದರು. ಆದರೆ, ವಿಜಯಕುಮಾರ್ ಅವರ ಮನವಿಗೆ ಸ್ಪಂದಿಸಿದೇ ಕರ್ತವ್ಯಲೋಪ ಎಸೆಗಿದ್ದರಿಂದ ಹರಿಹರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ರಮೇಶ್ ಕುಮಾರ್ ಹಾಗೂ ಪಿಎಸ್ಐ ಮೆಹಬೂಬ್ ಅಲಿ ಎಂಬ ಅಧಿಕಾರಿಗಳನ್ನು ಅಮಾನತು ಮಾಡಿರುವುದಾಗಿ ಸಂದೀಪ್ ಪಾಟೀಲ್ ಹೇಳಿದರು.

ಕಳೆದ ತಿಂಗಳು ಏಪ್ರಿಲ್ 29 ರಂದು ಬಿಜೆಪಿ-ಜೆಡಿಸ್ ಕಾರ್ಯಕರ್ತರ ನಡುವೆ ನಡೆದ ಮಾರಾಮಾರಿಯಲ್ಲಿ ವಿಜಯಕುಮಾರ್ ಮೃತಪಟ್ಟಿದ್ದರು. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಪಾಟೀಲ್ ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

ಜೆಡಿಎಸ್ ಕಾರ್ಯಕರ್ತನ ಕೊಲೆ; ಇಬ್ಬರ ಬಂಧನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+