4ನೇ ಹಂತ : ಬಹಿರಂಗ ಪ್ರಚಾರಕ್ಕೆ ಇಂದು ತೆರೆ
ನವದೆಹಲಿ, ಮೇ. 5 : ನಾಲ್ಕನೇ ಹಂತದ ಲೋಕಸಭೆ ಚುನಾವಣೆಯ ಮತದಾನ ಮೇ 7 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಕಾಂಗ್ರೆಸ್ ಮುಖಂಡ ಪ್ರಣಬ್ ಮುಖರ್ಜಿ, ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಸೇರಿದಂತೆ ಅನೇಕ ಘಟಾನುಘಟಿ ಮುಖಂಡರ ಹಣೆಬರಹವನ್ನು ಗುರುವಾರ ಮತದಾರರು ಬರೆಯಲಿದ್ದಾರೆ.
ನಾಲ್ಕನೇ ಹಂತದಲ್ಲಿ ಎಂಟು ರಾಜ್ಯ ಹಾಗೂ ಕೇಂದ್ರಾಡಳಿತ ಸೇರಿದಂತೆ ಒಟ್ಟು 85 ಲೋಕಸಭೆ ಕ್ಷೇತ್ರಗಳಲ್ಲಿ ಗುರುವಾರ ಮತದಾನ ನಡೆಯಲಿದೆ. ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್ ಇಟಾ ಲೋಕಸಭೆ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆ ನಡೆಸಿದ್ದಾರೆ.
ಅಲ್ಲದೇ, ಫಾರೂಕ್ ಅಬ್ದುಲ್, ಸಚಿನ್ ಪೈಲೆಟ್, ಶೇಖರ್ ಸುಮನ್, ಭಜನ್ ಲಾಲ್, ಶತೃಘ್ನ ಸಿನ್ಹಾ ಕೂಡಾ ಕಣದಲ್ಲಿದ್ದಾರೆ. ರಾಜಸ್ತಾನ-25, ಹರಿಯಾಣ-10, ದೆಹಲಿ-7, ಬಿಹಾರ್-3, ಜಮ್ಮು ಕಾಶ್ಮೀರ-1, ಪಂಜಾಬ-18, ಉತ್ತರ ಪ್ರದೇಶ-18 ಹಾಗೂ ಪಶ್ಚಿಮ ಬಂಗಾಲ-17 ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. 9.46 ಕೋಟಿ ಜನರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. 1.29 ಲಕ್ಷ ಮತಗಟ್ಟೆಗಳನ್ನು ರಚಿಸಲಾಗಿದ್ದು, ಸುಮಾರು 6 ಲಕ್ಷ ಜನರು ಮತದಾನ ಪ್ರಕ್ರಿಯೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು












Click it and Unblock the Notifications