ಎನ್ ಡಿಎಗೆ ಭವಿಷ್ಯವಿಲ್ಲ : ರಾಹುಲ್ ಗಾಂಧಿ

ಫಲಿತಾಂಶದ ನಂತರ ಕಾಂಗ್ರೆಸ್ ಪಕ್ಷ ಮೈತ್ರಿಗೆ ಮುಕ್ತವಾಗಿದೆ. ದೇಶದ ಜಾತ್ಯಾತೀತ ಪಕ್ಷಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾದರೆ ತಾವೂ ಸಿದ್ಧ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದರು. ಮುಖ್ಯವಾಗಿ ಎಡಪಕ್ಷಗಳನ್ನು ಗಮನದಲ್ಲಿರಿಸಿಕೊಂಡು ಮಾತನಾಡಿದ ರಾಹುಲ್ ಗಾಂಧಿ, ಯುಪಿಎಗೆ ಎಡಪಕ್ಷಗಳು ಬೆಂಬಲ ನೀಡುತ್ತವೆ. ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಸ್ಥಾನದಲ್ಲಿ ಮುಂದುವರೆಸಲು ಒಪ್ಪಿಗೆ ನೀಡಲಿವೆ ಎಂದು ಅವರು ಹೇಳಿದರು.
ಕಳೆದ ಅನೇಕ ವರ್ಷಗಳಿಂದ ಕಾಂಗ್ರೆಸ್ ಮತ್ತು ಎಡಪಕ್ಷಗಳು ಅವಿನಾಭಾವ ಸಂಬಂಧ ಹೊಂದಿವೆ. ಅಲ್ಲದೇ ಕಳೆದ ಯುಪಿಎ ಸರಕಾರದ ಅವಧಿಯಲ್ಲಿ ಎಡಪಕ್ಷಗಳು ಆರೋಗ್ಯ ಮತ್ತು ಶಿಕ್ಷಣ ಹೆಚ್ಚು ಒತ್ತು ನೀಡಿದ್ದವು. ಎಡಪಕ್ಷಗಳ ಎಲ್ಲ ಬೇಡಿಕೆಗಳನ್ನು ಮನಮೋಹನ್ ಸಿಂಗ್ ನೇತೃತ್ವದ ಸರಕಾರ ಈಡೇರಿಸಿದೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಎಡಪಕ್ಷಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲಿವೆ ಎಂದು ರಾಹುಲ್ ಗಾಂಧಿ ಹೇಳಿದರು.
ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಬಿಜೆಪಿ ಪಕ್ಷದಿಂದ ಕೋಮು ಸಂಘರ್ಷಗಳು ದೇಶದಲ್ಲಿ ಹೆಚ್ಚುತ್ತಿವೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅಲ್ಪಸಂಖ್ಯಾತರು ಭಯದಲ್ಲಿ ಜೀವನ ನಡೆಸುವಂತಾಗಿದೆ. ಒರಿಸ್ಸಾದ ಕಂದಮಾಲ್ ಪ್ರಕರಣ, ಕರ್ನಾಟಕದ ಮಂಗಳೂರು ಪಬ್ ದಾಳಿ ಸೇರಿ ಅನೇಕ ಘಟನೆಗಳು ನಡೆದಿರುವುದು ಜಗತ್ತಿಗೆ ಗೊತ್ತಿರುವ ಸಂಗತಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
ಯುಪಿಎಗೆ ಬೆಂಬಲ ಕುರಿತು ಚಿಂತನೆ : ಯೆಚೂರಿ












Click it and Unblock the Notifications