ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಆರಂಭ
ಬೆಂಗಳೂರು, ಮೇ. 6 : ವೃತ್ತಿ ಶಿಕ್ಷಣ ಸೀಟು ಆಯ್ಕೆಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ 2009ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬುಧವಾರದಿಂದ ಆರಂಭವಾಗಿದೆ. ಬೆಂಗಳೂರಿನ 59 ಕೇಂದ್ರಗಳು ಸೇರಿ ರಾಜ್ಯಾದ್ಯಂತ 227 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ.
ಇಂಜನಿಯರಿಂಗ್, ವೈದ್ಯ, ದಂತ ವೈದ್ಯ. ಐಎಸ್ ಎಂ, ಹೋಮಿಯೋಪತಿ ಸೀಟು ಆಯ್ಕೆಗೆ ಈ ಬಾರಿ 1,20,373 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ 32,513 ವಿದ್ಯಾರ್ಥಿಗಳು ಬೆಂಗಳೂರಿನ ಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಕಳೆದ ಬಾರಿಗಿಂತ 4 ಸಾವಿರ ವಿದ್ಯಾರ್ಥಿಗಳು ಹೆಚ್ಚಾಗಿದ್ದಾರೆ ಎಂದು ಪ್ರಾಧಿಕಾರ ತಿಳಿಸಿದೆ.
ಒಂದೇ ದಿನದಲ್ಲಿ ನಡೆಯುತ್ತಿದ್ದ ಸಿಇಟಿಯನ್ನು ಈ ಸಾಲಿನಿಂದ ಎರಡು ದಿನಕ್ಕೆ ವಿಸ್ತರಿಸಲಾಗಿದೆ. ಹೀಗಾಗಿ ಬುಧವಾರ ಮತ್ತು ಗುರುವಾರ ಒಟ್ಟು 4 ಅವಧಿಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಮೇ 6ಕ್ಕೆ ಜೀವಶಾಸ್ತ್ರ (ಬೆಳಗ್ಗೆ 10.30ರಿಂದ 11.50), ಗಣಿತ (ಮಧ್ಯಾಹ್ನ 2.30 ರಿಂದ 3.50) ಹಾಗೂ ಮೇ 7 ರಂದು ಭೌತಶಾಸ್ತ್ರ (ಬೆಳಗ್ಗೆ 10.30ರಿಂದ 11.50), ರಸಾಯನ ಶಾಸ್ತ್ರ (ಮಧ್ಯಾಹ್ನ 2.30 ರಿಂದ 3.50) ನಡೆಯಲಿದೆ ಎಂದು ಪ್ರಾಧಿಕಾರ ತಿಳಿಸಿದೆ. ಮೇ 8 ರಂದು ಗಡಿನಾಡು ಅಭ್ಯರ್ಥಿಗಳಿಗೆ ಬೆಳಗ್ಗೆ 11ಕ್ಕೆ ಹಾಗೂ ಹೊರನಾಡು ಕನ್ನಡಿಗರಿಗೆ ಮಧ್ಯಾಹ್ನ 1 ಪರೀಕ್ಷೆ ನಡೆಯಲಿವೆ.
(ದಟ್ಸ್ ಕನ್ನಡ ವಾರ್ತೆ)
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications