ಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಲದಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಎಡಪಕ್ಷಗಳು ರಾಜಕೀಯ ವೈರಿಗಳು. ಈ ಎರಡು ಪಕ್ಷಗಳು ಒಂದೇ ದೋಣಿಯಲ್ಲಿ ಸಾಗಲು ಸಾಧ್ಯವಿಲ್ಲ. ಕಾಂಗ್ರೆಸ್ ವರ್ತನೆ ಹೀಗೆ ಮುಂದುವರೆದಲ್ಲಿ ಕಾಂಗ್ರೆಸ್ ಜತೆಗಿನ ಮೈತ್ರಿಯನ್ನು ಕಡಿದುಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
ಮಂಗಳವಾರ ಕಾಂಗ್ರೆಸ್ ಯುವನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಅತ್ಯಂತ ನಾಚಿಕೆಗೇಡು ಎಂದು ಟೀಕಿಸಿದ ಅವರು, ನಮ್ಮ ಪಕ್ಷದ ಸಾಮರ್ಥ್ಯಕ್ಕೆ ಈ ಹೇಳಿಕೆ ಸವಾಲಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತವೆ ಎಂದು ಹೇಳಿದ್ದರು. ರಾಹುಲ್ ಹೇಳಿಕೆಯನ್ನು ಎಡಪಕ್ಷಗಳ ಮುಖಂಡರು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ರಾಹುಲ್ ಹೇಳಿಕೆಯನ್ನು ಲೇವಡಿ ಮಾಡಿದ ಬಿಜೆಪಿ ಮುಖಂಡ ಅರುಣ್ ಜೇಟ್ಲಿ, ಕಾಂಗ್ರೆಸ್ ಪಕ್ಷದ ಸೋಲುವುದು ಖಚಿತವಾಗಿದ್ದು, ಹತಾಶೆಯಿಂದ ಬೇರೊಂದು ಪಕ್ಷದ ಕಡೆಗೆ ಎದುರು ನೋಡುತ್ತಿದೆ ಎಂದು ಟೀಕಿಸಿದ್ದರು.
(ಏಜನ್ಸೀಸ್)












Click it and Unblock the Notifications