ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶೇ. 3ರ ಬಡ್ಡಿ ದರದ ಸಾಲಕ್ಕೆ ಸಿಎಂ ಚಾಲನೆ

By Staff
|
Google Oneindia Kannada News

Farm loan denotify on May 17, says CM
ಬೆಂಗಳೂರು, ಮೇ. 6: ಕೊನೆಗೂ ಶೇ. 3ರಷ್ಟು ಬಡ್ಡಿ ಸಾಲದ ಸೌಲಭ್ಯ ಒದಗಿಸಲು ಸರಕಾರ ಮುಂದಾಗಿದೆ. ಇದೇ ತಿಂಗಳು 17 ರಂದು ಈ ಬಗ್ಗೆ ಅಧಿಕೃತ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಜೆಟ್ ನಲ್ಲಿ ಘೋಷಿಸಿರುವ ಎಲ್ಲ ಯೋಜನೆಗಳನ್ನು ಅನುಷ್ಠಾನ ಮಾಡಲು ಸರಕಾರ ಬದ್ಧವಾಗಿದೆ. ಈ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದರು. ಸರಕಾರಿ ನೌಕರರಿಗೆ ಮನೆ ಬಾಡಿಗೆ ಭತ್ಯೆ ಹೆಚ್ಚಿಸುವ ಆದೇಶಿ ಹೊರಡಿಸಿ, ರೈತರಿಗೆ ಶೇ. 3 ರ ಬಡ್ಡಿ ದರದಲ್ಲಿ ಸಾಲ ನೀಡಲು ಆದೇಶ ಹೊರಡಿಸದಿರುವ ಬಗ್ಗೆ ಪ್ರತಿಪಕ್ಷಗಳು ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದವು. ಸದ್ಯ ಚುನಾವಣೆ ನೀತಿ ಸಂಹಿತೆ ಅಡ್ಡ ಬರುವ ಹಿನ್ನೆಲೆಯಲ್ಲಿ ಮೇ 17 ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

ರೈತರು ಎಲ್ಲ ಬ್ಯಾಂಕ್ ಗಳಿಂದ ಸಾಲ ಪಡೆಯುವಅನುಕೂಲತೆ ಬಗ್ಗೆ ಮಾತನಾಡಿದ ಯಡಿಯೂರಪ್ಪ, ರೈತರು ಎಲ್ಲ ಬ್ಯಾಂಕ್ ಗಳಿಂದ ಸಾಲ ಪಡೆಯಬಹುದು. ವಾಣಿಜ್ಯ ಬ್ಯಾಂಕ್ ನೀಡುವ ಬಡ್ಡಿ ದರದ ವ್ಯತ್ಯಾಸವನ್ನು ಸರಕಾರ ತುಂಬಿ ಕೊಡಲಿದೆ ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X