ಸಿಖ್ ರನ್ನು ಸಿಂಹಕ್ಕೆ ಹೋಲಿಸಿದ ರಾಹುಲ್

ಐದನೇ ಹಂತದ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಕೇಸರಿ ಪಡೆಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಹುಲ್, ಮನಮೋಹನ್ ಸಿಂಗ್ ದುರ್ಬಲ ಪ್ರಧಾನಿ ಎಂದು ಪದೆಪದೇ ಟೀಕಿಸುತ್ತಿರುವ ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಅವರಿಗೆ ಈ ರೀತಿ ತಿರುಗೇಟು ನೀಡಿದರು. ಸಿಖ್ ಜನರು ಮತ್ತು ಜನಾಂಗ ಅತ್ಯಂತ ಸಬಲರು ಎಂದು ನಮ್ಮ ಇತಿಹಾಸ ಹೇಳುತ್ತದೆ. ಆದರೆ, ಬಿಜೆಪಿ ಅಧಿಕಾರದ ದುರಾಶೆಗಾಗಿ ಜನರಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರ ವಿರುದ್ಧ ಇಲ್ಲಸಲ್ಲದ ಆರೋಪಗಳಲ್ಲಿ ನಿರತವಾಗಿದೆ ಎಂದು ಕಿಡಿಕಾರಿದರು.
ಸಿಖ್ ಜನಾಂಗದ ಮುಖಂಡರಾಗಿರುವ ಮನಮೋಹನ್ ಸಿಂಗ್ ಜಗತ್ತು ಕಂಡ ಅಪ್ರತಿಮ ಅರ್ಥಶಾಸ್ತ್ರಜ್ಞ. ಇಂತಹ ವ್ಯಕ್ತಿಯ ಮೇಲೆ ಬಿಜೆಪಿ ಗೂಬೆ ಕೂರಿಸುವುದಲ್ಲ, ಸಾರ್ವಜನಿಕವಾಗಿ ಅವಮಾನ ಮಾಡುವ ಕೆಲಸಕ್ಕೆ ಇಳಿದಿದೆ. ಆದ್ದರಿಂದ ಈ ಚುನಾವಣೆಯಲ್ಲಿ ಆ ಪಕ್ಷಕ್ಕೆ ತಕ್ಕ ಪಾಠ ಕಲಿಸಿ ಎಂದು ರಾಹುಲ್ ಮತದಾರರಲ್ಲಿ ಮನವಿ ಮಾಡಿಕೊಂಡರು.
(ಏಜನ್ಸೀಸ್)











Click it and Unblock the Notifications