ಪ್ರತಿ ತಾಲ್ಲೂಕಿನಲ್ಲಿ ಅಗ್ನಿಶಾಮಕ ಠಾಣೆ
ಮಡಿಕೇರಿ, ಮೇ. 7: ರಾಜ್ಯದ ಪ್ರತೀ ತಾಲ್ಲೂಕಿನಲ್ಲಿ ಅಗ್ನಿಶಾಮಕ ಠಾಣೆ ತೆರೆಯಲು ಸರ್ಕಾರ ಉದ್ದೇಶಿಸಿದೆ. ಈಗಾಗಲೇ 150 ಕಚೇರಿ ಇದ್ದು, ಇನ್ನೂ 56 ಅಗ್ನಿಶಾಮಕ ಕಚೇರಿ ಅಗತ್ಯವಿದZ. ಒಟ್ಟು 206 ಅಗ್ನಿಶಾಮಕ ಠಾಣಾ ಕಚೇರಿ ತೆರೆಯಲು ಸರ್ಕಾರ ಮಂಜೂರಾತಿ ನೀಡಿದೆ ಎಂದು ಅಗ್ನಿಶಾಮಕ ಮತ್ತು ಗೃಹ ರಕ್ಷಕದಳ ಡಿಜಿಪಿ ಜಿಜಾ ಹರಿಸಿಂಗ್ ತಿಳಿಸಿದ್ದಾರೆ.
ಮಡಿಕೇರಿಯ ಜಿಲ್ಲಾ ಗೃಹ ರಕ್ಷಕದಳದ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿಭಾಗೀಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಅಗ್ನಿಶಾಮಕ ಕಚೇರಿಯನ್ನು ತೆರೆದು ಉತ್ತಮ ಸೇವೆ ನೀಡಲು ಸರ್ಕಾರ ಉದ್ದೇಶಿಸಿದೆ ಎಂದರು. ರಾಜ್ಯ ಅಗ್ನಿಶಾಮಕ ದಳದಲ್ಲಿ 1800 ಸಿಬ್ಬಂದಿಗಳನ್ನು ನೇಮಿಸಿಕೊಳ್ಳಲಾಗಿದ್ದು, ಇನ್ನೂ 1200 ಸಿಬ್ಬಂದಿ ಮತ್ತು ನೂರಕ್ಕೂ ಹೆಚ್ಚು ಎಂಜಿನ್ಗಳ ಅಗತ್ಯವಿದೆ ಎಂದರು.
ರಾಜ್ಯದಲ್ಲಿ 27,000 ಗೃಹ ರಕ್ಷಕರಿದ್ದು, ಕಳೆದ ತಿಂಗಳು ನಡೆದ ಲೋಕಸಭಾ ಚುನಾವಣೆಯಲ್ಲಿ 17,000 ಹೋಂ ಗಾರ್ಡ್ಸ್(ಗೃಹ ರಕ್ಷಕ)ಗಳನ್ನು ನಿಯೋಜಿಸಲಾಗಿತ್ತು ಎಂದು ಅವರು ವಿವರಿಸಿದರು. ಗೃಹ ರಕ್ಷಕರಿಗೆ ಸರ್ಕಾರ ಎಲ್ಲಾ ರೀತಿಯ ನೆರವು ನೀಡುತ್ತಿದ್ದು, ಗೃಹ ರಕ್ಷಕರು ಲೋಕಸಭಾ ಚುನಾವಣೆಯಲ್ಲಿ ಉತ್ತಮ ಕೆಲಸ ನಿರ್ವಹಿಸಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳು ಮೂಲಭೂತ ಸೌಲಭ್ಯ ಒದಗಿಸಿದರೆ ಗೋಣಿಕೊಪ್ಪದಲ್ಲಿ ಸುಸಜ್ಜಿತ ಅಗ್ನಿಶಾಮಕ ಠಾಣೆ ಕಟ್ಟಡವನ್ನು ನಿರ್ಮಿಸಬಹುದು ಎಂದರು. ಮಡಿಕೇರಿ ನಗರದಲ್ಲಿರುವ ಅಗ್ನಿಶಾಮಕ ಠಾಣೆಗೆ ಉತ್ತಮ ರಸ್ತೆ ನಿರ್ಮಿಸಲು ಜಿಲ್ಲಾಡಳಿತ ಸಮ್ಮತಿಸಿದೆ. ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಬಂದು ನೆರೆಹಾವಳಿ ಸಂಭವಿಸುವುದರಿಂದ ಬೋಟ್ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಜಾ ಹರಿಸಿಂಗ್ ಇದೇ ಸಂದರ್ಭದಲ್ಲಿ ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications