ಜೂ.1 ರಿಂದ 3ರವರೆಗೆ ವಿಶೇಷ ಲಸಿಕಾ ಮೇಳ
ಗುಲಬರ್ಗಾ, ಮೇ. 7 : ಗುಲ್ಬರ್ಗಾ ನಗರದಲ್ಲಿ ಸುಮಾರು 5,000 ಮಕ್ಕಳು ಸೂಕ್ತ ಲಸಿಕೆಯಿಂದ ವಂಚಿತರಾಗಿದ್ದು, ಇಂಥ ಮಕ್ಕಳನ್ನು ಪತ್ತೆ ಹಚ್ಚಿ, ಒಂದು ತಿಂಗಳೊಳಗೆ ಎಲ್ಲಾ ಮಕ್ಕಳಿಗೆ ರೋಗನಿರೋಧಕ ಲಸಿಕೆ ಹಾಕಲು ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ಗುಲ್ಬರ್ಗಾ ವಿಶ್ವವಿದ್ಯಾಲಯದ ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಘಟಕ ಹಾಗೂ ಜಿಲ್ಲಾ ಆಡಳಿತದ ಸಂಯುಕ್ತಾಶ್ರಯದಲ್ಲಿ ವಿಶೇಷ ಮೇಳ ಹಮ್ಮಿಕೊಳ್ಳಲಾಗಿದೆ.
ಬುಧವಾರ ನಡೆದ 'ಆರೋಗ್ಯ ಬಡ್ತಿ' ಸಭೆಯಲ್ಲಿ ಮಾತನಾಡಿದ ಹೆಚ್ಕೆಎಡಿಬಿ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು, ಜಿಲ್ಲೆಯಲ್ಲಿ ಆರೋಗ್ಯ ಸೂಚ್ಯಂಕ ಕೆಳಮಟ್ಟದಲ್ಲಿದ್ದು, ಆರೋಗ್ಯ ಸುಧಾರಣೆ ನಿಟ್ಟಿನಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕಿದೆ ಎಂದರು. ಗುಲಬರ್ಗಾ ನಗರದಲ್ಲಿ 85 ಸಾವಿರ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಇದ್ದು, 80 ಸಾವಿರ ಮಕ್ಕಳಿಗೆ ನಿಯಮಿತವಾಗಿ ಕಾಲ ಕಾಲಕ್ಕೆ ಚಚ್ಚುಮದ್ದು ಹಾಕಲಾಗಿದೆ.
ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ, ವಿಶೇಷ ಮೇಳ ಹಮ್ಮಿಕೊಂಡು ಲಸಿಕೆ ವಂಚಿತ ಮಕ್ಕಳನ್ನು ಗುರುತಿಸಿ, ಶೇಕಡ 100 ಮಕ್ಕಳಿಗೆ ಲಸಿಕೆ ಮಾಡಬೇಕಾಗಿದೆ. ಈ ಮೇಳದಲ್ಲಿ ಗುಲ್ಬರ್ಗಾ ಮಹಾನಗರ ಪಾಲಿಕೆ, ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಪಾಲ್ಗೊಳ್ಳಬೇಕು ಎಂದು ಅವರು ತಿಳಿಸಿದರು. ಗುಲ್ಬರ್ಗಾ ನಗರದಲ್ಲಿ ಜೂನ್ 1 ರಿಂದ 3 ರವರೆಗೆ ಈ ಕಾರ್ಯಾಚರಣೆ ಹಮ್ಮಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು. ಲಸಿಕೆ ವಂಚಿತ ಮಕ್ಕಳನ್ನು ಮಹಾನಗರ ಪಾಲಿಕೆಯು ಗುರುತಿಸಬೇಕಿದ್ದು, ಪತ್ತೆ ಹಚ್ಚುವ ಕಾರ್ಯಕ್ಕೆ ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಳ್ಳುವಂತೆ ಅವರು ಸೂಚಿಸಿದರು. (ದಟ್ಸ್ ಕನ್ನಡ ವಾರ್ತೆ)
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications