ವಿದ್ಯಾರ್ಥಿಗಳ ಪ್ರತಿಭಟನೆ : ಕಂಪ್ಯೂಟರ್ ಗಳು ನಾಶ
ಬೆಂಗಳೂರು, ಮೇ. 7 : ಮೂಲಭೂತ ಸೌಲಭ್ಯಗಳಿಲ್ಲ ಎಂದು ರೊಚ್ಚಿಗೆದ್ದ ಸುಮಾರು 100 ಕ್ಕೂ ಹೆಚ್ಚು ವಿದ್ಯಾರ್ಥಿ ಕಾಲೇಜಿನ 80 ಕಂಪ್ಯೂಟರ್ ಸೇರಿ ಅನೇಕ ಪಿಠೋಪಕರಣಗಳನ್ನು ಧ್ವಂಸ ಮಾಡಿರುವ ಘಟನೆ ನಗರದ ಬಿಟಿಎಂ ಲೇಔಟ್ ಎನ್ ಎಸ್ ಪಾಳ್ಯದಲ್ಲಿರುವ ಇಕ್ಫಾಯ್(ICFAI) ಕಾಲೇಜಿನಲ್ಲಿ ನಡೆದಿದೆ.
ಇಕ್ಫಾಯ್ ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳಿಲ್ಲ. ಮುಖ್ಯವಾಗಿ ಲೈಬ್ರರಿ, ಪ್ರಯೋಗಾಲಯಗಳ ಕೊರತೆ ಇದೆ. ಈ ಕುರಿತು ಅನೇಕ ಕಾಲೇಜಿನ ಆಡಳಿತ ಮಂಡಳಿಗೆ ವಿದ್ಯಾರ್ಥಿಗಳು ದೂರು ಸಲ್ಲಿಸಿ ಸೌಲಭ್ಯಗಳನ್ನು ಒದಗಿಸಲು ಮನವಿ ಮಾಡಿಕೊಂಡಿದ್ದಾರೆ. ಆದರೆ, ಕಾಲೇಜಿನ ಮುಖ್ಯಸ್ಥರು ಕ್ಯಾರೇ ಎನ್ನದೆ ಹಿನ್ನೆಲೆಯಲ್ಲಿ ಇಂದು ರೊಚ್ಚಿಗೆದ್ದ ಸುಮಾರು 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಏಕಾಏಕಿ ಕಾಲೇಜಿಗೆ ನುಗ್ಗಿ 80ಕ್ಕೂ ಹೆಚ್ಚು ಕಂಪ್ಯೂಟರ್ ಗಳನ್ನು ಒಡೆದು ಹಾಕಿದ್ದಾರೆ. ಕಾಲೇಜಿನ ಕಿಟಕಿ, ಗಾಜು ನುಚ್ಚನೂರಾಗಿವೆ. ಮಹತ್ವದ ದಾಖಲೆಗಳು ನಾಶವಾಗಿವೆ.
ಉತ್ತರಾಂಚಲ ಮೂಲದ ಕಾಲೇಜು ಇದಾಗಿದ್ದು, ಮಾನ್ಯತೆ ಇಲ್ಲದಿರುವುದು ವಿದ್ಯಾರ್ಥಿಗಳ ಕೋಪ ನೆತ್ತಿಗೇರುವಂತೆ ಮಾಡಿದೆ. ಪ್ರವೇಶ ಪಡೆದುಕೊಳ್ಳುವಾಗ ನಮ್ಮ ಕಾಲೇಜು ಮಾನ್ಯತೆ ಹೊಂದಿದೆ ಎಂದು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ನಂಬಿಸಿತ್ತು. ಇದೀಗ ಉತ್ತರಾಂಚಲದಲ್ಲಿರುವ ಕಾಲೇಜಿನ ಮುಖ್ಯಸ್ಥರು ಇತ್ತೀಚೆಗೆ ಬೆಂಗಳೂರಿನ ಕಾಲೇಜಿಗೆ ಮಾನ್ಯತೆ ಇಲ್ಲ ಎಂದಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ 25 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ












Click it and Unblock the Notifications