ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ

By Staff
|
Google Oneindia Kannada News

Yeddyurappa
ಬೆಂಗಳೂರು, ಮೇ. 7 : ಲೋಕಸಭೆ ಚುನಾವಣೆ ನಂತರ ಪಕ್ಷೇತರ ಸಚಿವರನ್ನು ಸಂಪುಟದಿಂದ ಕೈಬಿಡುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಫಲಿತಾಂಶದ ನಂತರ ಸಂಪುಟ ಪುನರ್ ರಚನೆ ಮಾಡುವುದನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ ಅವರು, ಈ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ಅಗತ್ಯ ಬೆಂಬಲ ನೀಡಿರುವ ಪಕ್ಷೇತರರನ್ನು ಸಂಪುಟದಿಂದ ಕೈಬಿಡುವ ಉದ್ದೇಶ ತಮಗಿಲ್ಲ ಎಂದರು. ಲೋಕಸಭೆ ಫಲಿತಾಂಶ ಬಂದ ನಂತರ ಸರಿಯಾಗಿ ಕಾರ್ಯನಿರ್ವಹಿಸದ ಸಚಿವರನ್ನು ಕೈಬಿಡಲಾಗುವುದು ಎಂದು ಈ ಹಿಂದೆ ಹೇಳಿದ್ದಿರಲ್ಲ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ. ನಮ್ಮೆಲ್ಲಾ ಸಚಿವರೂ ಚೆನ್ನಾಗಿ ಕೆಲಸ ಮಾಡಿದ್ದಾರೆ ಎಂದು ಯಡಿಯೂರಪ್ಪ ಸಮರ್ಥಿಸಿಕೊಂಡರು.

ಪಕ್ಷೇತರ ಸಚಿವರಾದ ಗೂಳಿಹಟ್ಟಿ ಶೇಖರ್ ಹಾಗೂ ವೆಂಕಟರಮಣಪ್ಪ ಅವರನ್ನು ಸಂಪುಟದಿಂದ ಕೈಬಿಟ್ಟು, ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಯಾಗಿರುವ ಬೆಂಗಳೂರಿನ ಗೋವಿಂದರಾಜ ನಗರ ಶಾಸಕರಾಗಿದ್ದ ವಿ ಸೋಮಣ್ಣ ಅವರನ್ನು ಸಂಪುಟದಲ್ಲಿ ಸೇರಿಸಿಕೊಳ್ಳುತ್ತಾರೆ ಎಂಬ ಸುದ್ದಿ ದಟ್ಟವಾಗಿ ಹಬ್ಬಿದೆ. ಸೋಮಣ್ಣ ಅವರು ನಗರಾಭಿವೃದ್ಧಿ ಖಾತೆ ಬೇಕು ಎಂದು ಪಟ್ಟು ಹಿಡಿದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿತ್ತು.

(ದಟ್ಸ್ ಕನ್ನಡ ವಾರ್ತೆ)

ರೆಡ್ಡಿಗಳನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹ
ಶೇ. 3ರ ಬಡ್ಡಿ ದರದ ಸಾಲಕ್ಕೆ ಸಿಎಂ ಚಾಲನೆ
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X